ಬ್ರೇಕಿಂಗ್ ನ್ಯೂಸ್
25-04-24 02:19 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 25: ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ಕೊಟ್ಟು ಮಾಹಿತಿ ಪಡೆಯುತ್ತಿದ್ದಾರೆ.
ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ಬಿಡ್ನಾಳದಲ್ಲಿರುವ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು, ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಿರೇಮಠ ಅವರ ವಿಚಾರಣೆ ಮಾಡುವುದರ ಜೊತೆಗೆ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲಿ ಏಪ್ರಿಲ್ 18ರ ಸಂಜೆ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿತ್ತು. ಪ್ರಕರಣದ ಆರೋಪಿ ಫಯಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಈ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರಿದಿದೆ. ಏಪ್ರಿಲ್ 22 ಸೋಮವಾರ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು.
ಆರೋಪಿ ಫಯಾಜ್ನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ನಿನ್ನೆ ಕೊಲೆ ನಡೆದ ಕಾಲೇಜು ಆವರಣಕ್ಕೆ ಆರೋಪಿಯನ್ನು ಕರೆತಂದು ಮಹಜರು ಮಾಡಿದರು. ಧಾರವಾಡ ಕೇಂದ್ರ ಕಾರಾಗೃಹದಿಂದ ಆರೋಪಿಯನ್ನು ಬುಧವಾರ ಸಿಐಡಿ ವಶಕ್ಕೆ ಪಡೆದಿದೆ. ಸಂಪೂರ್ಣ ಮಾಹಿತಿ ಸಂಗ್ರಹಕ್ಕೆ ಆರೋಪಿ ಫಯಾಜ್ನನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ ತಂಡ ಜೆಎಂಎಫ್ಸಿ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆ 6 ದಿನಗಳ ಕಾಲ ಆರೋಪಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿದೆ. ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ಮಂಗಳವಾರದಿಂದ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದೆ
CID team visits Neha House at Hubballi, talks to parents, searches house. A team of CID officials led by SP Venkatesh visited Neha’s house and collected the statement of Neha’s mother Geeta and father Niranjanaiah Hiremath on Thursday. The inquiry is still on.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm