ಬ್ರೇಕಿಂಗ್ ನ್ಯೂಸ್
26-04-24 04:53 pm HK News Desk ಕರ್ನಾಟಕ
ಚಾಮರಾಜನಗರ, ಏ, 26: ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು ಇದೀಗ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
ಇಂದು ರಾಜ್ಯದ 14 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮತಗಟ್ಟೆಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೇ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ ಘಟನೆ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.
ಮೂಲಸೌಕರ್ಯಕ್ಕೆ ಆಗ್ರಹಿಸಿ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ 5 ಗ್ರಾಮಗಳ ಜನರು ಮತದಾನ ಬಹಿಷ್ಕಾರ ಮಾಡಿದ್ದರು. ಬಳಿಕ ಅಧಿಕಾರಿಗಳು ಮನವೊಲಿಕೆಗೆ ತೆರಳಿದ್ದ ವೇಳೆ ತಾವು ಮತದಾನ ಮಾಡಲ್ಲವೆಂದು ಗ್ರಾಮಸ್ಥರೆಲ್ಲ ಸೇರಿ ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ.

ಘಟನೆಗೆ ಕಾರಣವೇನು?:
ಮಲೆ ಮಹದೇಶ್ವರ ಗ್ರಾಮ ಪಂಚಾಯಿತಿಗೆ ಸೇರಿದ ಇಂಡಿಗನತ್ತ, ಮೆಂದಾರೆ, ತುಳಿಸಿಕರೆ, ತೇಕಣೆ, ಪಡಸಲನತ್ತ ಈ ಗ್ರಾಮಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸದೆ ಮತದಾರರು ದೂರ ಉಳಿದಿದ್ದರು.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತುಳಿಸಿಕರೆಯ 480 ಮತದಾರರು, ಇಂಡಿಗನತ್ತ ಪೋಡಿನ 528 ಮತದಾರರು, ಪಡಸಲನತ್ತ ಪೋಡಿನ 298 ನಿವಾಸಿಗಳು ಮತದಾನದಿಂದ ದೂರ ಉಳಿದಿದ್ದರು. ತಮಗೆ ಮೂಲಸೌಕರ್ಯ ಕೊಡಬೇಕು ಇಲ್ಲದಿದ್ದರೇ ತಾವು ಮತ ಹಾಕುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ವಿಚಾರ ಅರಿತ ಪೊಲೀಸ್ ಸಿಬ್ಬಂದಿ, ಚುನಾವಣಾ ಅಧಿಕಾರಿಗಳು ಮತದಾರರನ್ನು ಮನವೊಲಿಸಲು ತೆರಳಿದ್ದರು. ಈ ವೇಳೆ ಕೆಲವರನ್ನು ಮತದಾನಕ್ಕೆ ಮನವೊಲಿಸಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಧ್ಚಂಸ ಮಾಡಿ, ಇವಿಎಂ ಹೊಡೆದು ಹಾಕಿ, ಕಲ್ಲು ತೂರಿದ್ದಾರೆ. ಈ ವೇಳೆ ಅಲ್ಲಿದ್ದ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Angry over politicians for no development in Village, angry people destroy Poll Booth In Chamarajanagar by villagers.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm