Election Commission, Chamarajanagar, Lok Sabha Election: ಚಾಮರಾಜನಗರದಲ್ಲಿ ಮತದಾನ ಬಹಿಷ್ಕರಾ, ಮತಗಟ್ಟೆ ಧ್ಚಂಸ ; ಏ.29ಕ್ಕೆ ಮರು ಮತದಾನಕ್ಕೆ ಆದೇಶ

27-04-24 07:50 pm       HK News Desk   ಕರ್ನಾಟಕ

ಮತದಾನ ಬಹಿಷ್ಕಾರ ಮಾಡಿದ ಬಳಿಕ ಮತಗಟ್ಟೆಯನ್ನೇ ಧ್ಚಂಸಗೊಳಿಸಿದ್ದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚಾಮರಾಜನಗರ, ಏ.27: ಮತದಾನ ಬಹಿಷ್ಕಾರ ಮಾಡಿದ ಬಳಿಕ ಮತಗಟ್ಟೆಯನ್ನೇ ಧ್ಚಂಸಗೊಳಿಸಿದ್ದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮತಗಟ್ಟೆ ಸಂಖ್ಯೆ 146 ರಲ್ಲಿ ಸೋಮವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೂ ಮರು ಮತದಾನ ಜರುಗಲಿದೆ.

ಶುಕ್ರವಾರ ಮತದಾನ ಬಹಿಷ್ಕಾರದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಮನವೊಲಿಕೆಗೆ ತೆರಳಿದ್ದ ವೇಳೆ ಗ್ರಾಮದ ಕೆಲವರು ಮತಗಟ್ಟೆಯನ್ನೇ ಧ್ವಂಸ ಮಾಡಿದ್ದ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದಿತ್ತು.

ಈ ಘಟನೆಗೆ ಸಂಬಂಧಿಸಿದಂತೆ 25 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

The Election Commission said on Saturday that re-polling will be conducted at a polling station in Hanur which falls under Chamarajanagar Parlimentary Constituency in Karnataka on April 29.