ಬ್ರೇಕಿಂಗ್ ನ್ಯೂಸ್
28-04-24 02:41 pm HK News Desk ಕರ್ನಾಟಕ
ಬೆಂಗಳೂರು, ಎ.28: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಎಸ್ ಐಟಿ ರಚಿಸಿದ್ದೇವೆ. ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಎಡಿಜಿಪಿ ಬಿ.ಕೆ. ಸಿಂಗ್ ಅವರು ಈ ಹಿಂದೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ತಂಡದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಮೂವರು ಎಸ್ ಪಿ, 4 ಡಿವೈಎಸ್ ಪಿ ಅವರನ್ನೊಳಗೊಂಡ ಎಸ್ಐಟಿ ರಚನೆಯಾಗಿದ್ದು, ಮೂವರು ಎಸ್ ಪಿಗಳಲ್ಲಿ ಓರ್ವ ಮಹಿಳಾ ಎಸ್ಪಿ ಇರಲಿದ್ದಾರೆ ಎಂದರು.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಹಲವಾರು ವಿಡಿಯೋಗಳು 2-3 ದಿನಗಳಿಂದ ಹಾಸನ ಜಿಲ್ಲೆಯಾದ್ಯಂತ ಹರಿದಾಡುತ್ತಿದೆ. ಈ ರೀತಿಯ ನೂರಾರು ವಿಡಿಯೋಗಳಿವೆ ಎಂದು ಹೇಳಲಾಗುತ್ತಿದೆ. ಟ್ವಿಟರ್ ಸೇರಿದಂತೆ ಸೋಷಿಯಲ್ ಮಿಡಿಯಾಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಆದರೆ ಇದು ಮಾರ್ಫ್ ಮಾಡಲಾದ ವಿಡಿಯೋ, ತನ್ನದಲ್ಲ, ತನಗೂ ಅದಕ್ಕೂ ಸಂಬಂಧ ಇಲ್ಲ ಎಂದು ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದರು.
ವಿಡಿಯೋ ಪ್ರಕರಣ ಸುದ್ದಿ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದ್ದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಸಿಎಂಗೆ ಪತ್ರ ಬರೆದು ತನಿಖೆ ಮಗೆ ಆಗ್ರಹಿಸಿದ್ದರು.
Prajwal Revanna sex videos leaked case, SIT team formed, says Home minister Parameshwara. Prajwal Revanna sex videos have been leaked it is said more than thousand videos have been saved in the pendrive.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm