ಬ್ರೇಕಿಂಗ್ ನ್ಯೂಸ್
28-04-24 03:09 pm Bangalore Correspondent ಕರ್ನಾಟಕ
ಬೆಂಗಳೂರು, ಎ.28: ಹಾಸನದಲ್ಲಿ ಹೊರಬಿದ್ದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಪೆನ್ ಡ್ರೈವ್ ಬಗ್ಗೆ ವ್ಯಂಗ್ಯ ಪ್ರಶ್ನೆಯನ್ನು ಎತ್ತಿದ್ದಾರೆ. ಕುಮಾರಸ್ವಾಮಿ ಅವರು ಕಳೆದ ಚುನಾವಣೆ ವೇಳೆಗೆ ತೋರಿಸುತ್ತಿದ್ದ ಪೆನ್ ಡ್ರೈವ್ ಯಾವುದು, ಅದರಲ್ಲಿ ಏನಿದೆ ಎಂಬುದು ಆಗ ನನಗೆ ಗೊತ್ತಿರಲಿಲ್ಲ. ಅದರಲ್ಲಿ ಏನಿದೆ ಎಂದು ಈಗ ಗೊತ್ತಾಯಿತು. ಈ ಪೆನ್ ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಚೆನ್ನಾಗಿ ಗೊತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಕುಮಾರಣ್ಣ ಅವರು ತಮ್ಮ ಜೇಬಿನಲ್ಲೇ ಪೆನ್ ಡ್ರೈವ್ ಇಟ್ಟುಕೊಂಡಿದ್ದನ್ನು ಮಾಧ್ಯಮದವರಿಗೆ ತೋರಿಸಿದ್ದರು. ಹೀಗಾಗಿ ಇದರ ಬಗ್ಗೆ ಕುಮಾರಸ್ವಾಮಿ ಅವರನ್ನೇ ನೀವು ಕೇಳಬೇಕು. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ ಎಂದು ಹೇಳಿದರು. ಮಾಧ್ಯಮಗಳು ಈ ವಿಚಾರದಲ್ಲಿ ಸುಳ್ಳು ಹೇಳುತ್ತಿವೆ. ಅದು ಬರೀ ಹಾಸನದ ನಾಯಕನದಲ್ಲ. ಹಾಸನ ಲೋಕಸಭಾ ಕ್ಷೇತ್ರದ ಎಡಿಎ ಮೈತ್ರಿ ಕೂಟದ ಅಭ್ಯರ್ಥಿಯದ್ದು, ಸಂಸದನದ್ದು. ಹೀಗಾಗಿ ಈ ವಿಚಾರವಾಗಿ ಪ್ರಧಾನಮಂತ್ರಿಗಳು, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ತನದ ಬಗ್ಗೆ ಮಾತನಾಡುತ್ತಿದ್ದ ಅಶ್ವತ್ಥ್ ನಾರಾಯಣ್ ಉತ್ತರ ನೀಡಬೇಕು. ನಮ್ಮ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾಡುತ್ತಿದ್ದಾರೆ ಎಂದು ಅವರೇ ದೂರು ಕೊಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ಓದಿದೆ. ಮಹಿಳಾ ಆಯೋಗದ ಅಧ್ಯಕ್ಷರು ಇದೆಲ್ಲವನ್ನು ನೋಡಿ ರಾಜ್ಯದ ಗೃಹ ಸಚಿವರು ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ನೀವು (ಮಾಧ್ಯಮದವರು) ಯಾಕೆ ಮೌನ ತಾಳುತ್ತಿದ್ದೀರಿ? ಈ ವಿಚಾರದಲ್ಲಿ ನೀವು ರಾಜ್ಯದ ಜನತೆಗೆ ಬೆಳಕು ಚೆಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.
ಸಂತ್ರಸ್ತ ಮಹಿಳೆಯರ ಪರವಾಗಿ ಕಾಂಗ್ರೆಸ್ ನಿಲ್ಲಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳು ಬಹುಮುಖ್ಯ ಆಧಾರಸ್ತಂಭ. ನೀವು ನಿಮ್ಮ ನಡುವಣ ಪೈಪೋಟಿ, ಆಂತರಿಕ ವಿಚಾರಕ್ಕೆ, ಬೇರೆಯವರಿಗೆ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಇಂತಹ ದೊಡ್ಡ ವಿಚಾರಗಳನ್ನು ಮುಚ್ಚಿ ಹಾಕುತ್ತಿರುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಭಾವಿಸುತ್ತೇನೆ. ನಮ್ಮ ಆತ್ಮಸಾಕ್ಷಿಗಾದರೂ ನಾವು ಕೆಲಸ ಮಾಡಬೇಕು ಅಲ್ಲವೇ ಎಂದರು.
DK shivakumar slams Prajwal Revanna over his sex leaked videos, says that the pen drive kumarswami was showing was of Prajwal Revanna he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm