ಬ್ರೇಕಿಂಗ್ ನ್ಯೂಸ್
29-04-24 06:34 pm HK News Desk ಕರ್ನಾಟಕ
ರಾಮನಗರ, ಏ.29: ಬೆಂಗಳೂರಿನಿಂದ ಕನಕಪುರದ ಮೇಕೆದಾಟು ನೋಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಗಳು ಕಾಲು ಜಾರಿ ನದಿಯಲ್ಲಿ ಸಾವನ್ನಪ್ಪಿದ್ದಾರೆ.
ಇವರನ್ನು ಪೀಣ್ಯಾ ಸೆಕೆಂಡ್ ಸ್ಟೇಜ್ನ ಇಂಜಿನಿಯರಿಂಗ್ ಕಾಲೇಜ್ನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಒಟ್ಟು 12 ಜನ ವಿದ್ಯಾರ್ಥಿಗಳು ಪ್ರವಾಸ ಬಂದಿದ್ದರಂತೆ, ಈ ಪೈಕಿ 5 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅದೃಷ್ಟವಶಾತ್ 7 ವಿದ್ಯಾರ್ಥಿಗಳು ಬದುಕುಳಿದಿದ್ದಾರೆ ಎಂದು ದೃಢವಾಗಿದೆ.
ಬೇಸಿಗೆಯ ಬಿಸಿ ತಾಳಲಾರದೆ, ಈ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾವೇರಿ ನದಿ ಹರಿಯುವ ಸಂಗಮಕ್ಕೆ ಪ್ರವಾಸ ಕೈಗೊಂಡಿದ್ದರು. ಅದೇ ರೀತಿ ಇದರಲ್ಲಿ 12 ಜನ ವಿದ್ಯಾರ್ಥಿಗಳು, ಟಿಟಿ ವಾಹನದಲ್ಲಿ ಮೇಕೆದಾಟಿಗೆ ತೆರಳಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮೇಕೆದಾಟು ನೋಡಲೆಂದು ಹೋಗಿದ್ದ 12 ಕಾಲೇಜು ವಿದ್ಯಾರ್ಥಿಗಳ ಪೈಕಿ 5 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಅಭಿಷೇಕ್, ತೇಜಸ್, ಹರ್ಷಿತ್, ವರ್ಷಾ, ನೇಹ ಸಾವನ್ನಪ್ಪಿರುವ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಕನಕಪುರದ ಸಂಗಮದಲ್ಲಿ ಕೈ ಹಿಡಿದು ಒಬ್ಬರೊಬ್ಬರು ಮತ್ತೊಂದು ದಡಕ್ಕೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಪಟ್ಟವರಲ್ಲಿ ವರ್ಷ (20), ಕೆಎಲ್ಇ ಕಾಲೇಜು ರಾಜಾಜಿನಗರ 2ನೇ ಹಂತ, ಅಭಿಷೇಕ್ (20) ಬಿಹಾರ ಮೂಲದವರಾಗಿದ್ದು ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ, ಹರ್ಪಿತ ಎನ್.ಎಲ್ (20) ಎಂಜಿನಿಯರಿಂಗ್ 2nd ಇಯರ್ ಚಿಕ್ಕಬಾಣವಾರ ಆರ್.ಆರ್ ಕಾಲೇಜು, ತೇಜಸ್ (21) ಹಾಗೂ ನೇಹ (19) ಕೆಮಿಸ್ಟ್ರಿ ಕೆಎಲ್ಇ ಕಾಲೇಜು ಆರ್.ಆರ್ ನಗರ ಎಂದು ಗುರುತಿಸಲಾಗಿದೆ.
ಇನ್ನು ಈ ವಿದ್ಯಾರ್ಥಿಗಳ ಮೃತದೇಹವನ್ನು ದಯಾನಂದ ವಿದ್ಯಾಸಾಗರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Ramanagara Five students from Bangalore drowned in Cauvery river at Mekedatu. It is gathered that the victims, identified as Harshita, Abhishek, Tejas, Varsha, and Sneha, were all engineering students from Bengaluru.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm