ಬ್ರೇಕಿಂಗ್ ನ್ಯೂಸ್
29-04-24 06:34 pm HK News Desk ಕರ್ನಾಟಕ
ರಾಮನಗರ, ಏ.29: ಬೆಂಗಳೂರಿನಿಂದ ಕನಕಪುರದ ಮೇಕೆದಾಟು ನೋಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಗಳು ಕಾಲು ಜಾರಿ ನದಿಯಲ್ಲಿ ಸಾವನ್ನಪ್ಪಿದ್ದಾರೆ.
ಇವರನ್ನು ಪೀಣ್ಯಾ ಸೆಕೆಂಡ್ ಸ್ಟೇಜ್ನ ಇಂಜಿನಿಯರಿಂಗ್ ಕಾಲೇಜ್ನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಒಟ್ಟು 12 ಜನ ವಿದ್ಯಾರ್ಥಿಗಳು ಪ್ರವಾಸ ಬಂದಿದ್ದರಂತೆ, ಈ ಪೈಕಿ 5 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅದೃಷ್ಟವಶಾತ್ 7 ವಿದ್ಯಾರ್ಥಿಗಳು ಬದುಕುಳಿದಿದ್ದಾರೆ ಎಂದು ದೃಢವಾಗಿದೆ.
ಬೇಸಿಗೆಯ ಬಿಸಿ ತಾಳಲಾರದೆ, ಈ ವಿದ್ಯಾರ್ಥಿಗಳು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾವೇರಿ ನದಿ ಹರಿಯುವ ಸಂಗಮಕ್ಕೆ ಪ್ರವಾಸ ಕೈಗೊಂಡಿದ್ದರು. ಅದೇ ರೀತಿ ಇದರಲ್ಲಿ 12 ಜನ ವಿದ್ಯಾರ್ಥಿಗಳು, ಟಿಟಿ ವಾಹನದಲ್ಲಿ ಮೇಕೆದಾಟಿಗೆ ತೆರಳಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮೇಕೆದಾಟು ನೋಡಲೆಂದು ಹೋಗಿದ್ದ 12 ಕಾಲೇಜು ವಿದ್ಯಾರ್ಥಿಗಳ ಪೈಕಿ 5 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಅಭಿಷೇಕ್, ತೇಜಸ್, ಹರ್ಷಿತ್, ವರ್ಷಾ, ನೇಹ ಸಾವನ್ನಪ್ಪಿರುವ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಕನಕಪುರದ ಸಂಗಮದಲ್ಲಿ ಕೈ ಹಿಡಿದು ಒಬ್ಬರೊಬ್ಬರು ಮತ್ತೊಂದು ದಡಕ್ಕೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತ ಪಟ್ಟವರಲ್ಲಿ ವರ್ಷ (20), ಕೆಎಲ್ಇ ಕಾಲೇಜು ರಾಜಾಜಿನಗರ 2ನೇ ಹಂತ, ಅಭಿಷೇಕ್ (20) ಬಿಹಾರ ಮೂಲದವರಾಗಿದ್ದು ಮಲ್ಲೇಶ್ವರ ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ, ಹರ್ಪಿತ ಎನ್.ಎಲ್ (20) ಎಂಜಿನಿಯರಿಂಗ್ 2nd ಇಯರ್ ಚಿಕ್ಕಬಾಣವಾರ ಆರ್.ಆರ್ ಕಾಲೇಜು, ತೇಜಸ್ (21) ಹಾಗೂ ನೇಹ (19) ಕೆಮಿಸ್ಟ್ರಿ ಕೆಎಲ್ಇ ಕಾಲೇಜು ಆರ್.ಆರ್ ನಗರ ಎಂದು ಗುರುತಿಸಲಾಗಿದೆ.
ಇನ್ನು ಈ ವಿದ್ಯಾರ್ಥಿಗಳ ಮೃತದೇಹವನ್ನು ದಯಾನಂದ ವಿದ್ಯಾಸಾಗರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Ramanagara Five students from Bangalore drowned in Cauvery river at Mekedatu. It is gathered that the victims, identified as Harshita, Abhishek, Tejas, Varsha, and Sneha, were all engineering students from Bengaluru.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm