ಬ್ರೇಕಿಂಗ್ ನ್ಯೂಸ್
30-04-24 03:35 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.30: ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟು, ಅವರ ಪರ ಪ್ರಚಾರ ಮಾಡಿ, ಅವರನ್ನು ಗೆಲ್ಲಿಸಿದ್ದು ಯಾರು? ಎಂಬುದಕ್ಕೆ ಕಾಂಗ್ರೆಸ್ನವರು ಉತ್ತರಿಸಬೇಕು’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಪ್ರಜ್ವಲ್ ಈಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ. ಅವರು ಗೆದ್ದ ನಂತರ ನಮ್ಮನ್ನು ಪ್ರಶ್ನೆ ಮಾಡಿದರೆ ನಾವು ಉತ್ತರಿಸುತ್ತೇವೆ ಎಂದಿದ್ದಾರೆ.

ಪೆನ್ಡ್ರೈವ್ನಲ್ಲಿರುವ ವಿಡಿಯೊಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ವಿಡಿಯೊಗಳ ಬಗ್ಗೆ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಲವ್ ಜಿಹಾದ್ ತಂದಿದೆ. ಅದರ ಪ್ರಯೋಗ ಹುಬ್ಬಳ್ಳಿಯಲ್ಲಿ ಆಗಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ. ನೇಹಾಗೆ ನ್ಯಾಯ ದೊರಕಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರಕ್ಕೆ ಕಾಂಗ್ರೆಸ್ ಸರ್ಕಾರ ತನ್ನ ಪಾಲು ಸೇರಿಸಿ ನೇರವಾಗಿ ರೈತರಿಗೆ ತಲುಪಿಸಬೇಕು. ಆ ಮೂಲಕ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ತೋರ್ಪಡಿಸಬೇಕು. ಈ ಹಣವನ್ನು ಲೂಟಿ ಮಾಡಿ ಮಧ್ಯಪ್ರದೇಶ, ರಾಜಸ್ಥಾನಗಳಿಗೆ ಕಳಿಸಬಾರದು ಎಂದು ಆಗ್ರಹಿಸಿದರು.
Prajwal Revanna sex video case, this case has no connection with BJP says R Ashok.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm