ಬ್ರೇಕಿಂಗ್ ನ್ಯೂಸ್
01-05-24 01:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಅಶ್ಲೀಲ ಸಿಡಿ ಭೀತಿ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿಯಾಗುವಂತಹ ವರದಿ, ದೃಶ್ಯ, ಪೋಟೋ ಸೇರಿದಂತೆ ಯಾವುದೇ ರೀತಿಯ ಸುದ್ದಿಗಳನ್ನು ಪ್ರಕಟಿಸದಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್ ನಗರದ ನ್ಯಾಯಾಲಯದಿಂದ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ಪಡೆದಿದ್ದಾರೆ.
ಕಾಂತೇಶ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ಸಿಸಿಎಚ್ 11ನೇ ನ್ಯಾಯಾಲಯ ಇಂಟರ್ನೆಟ್, ಫೇಸ್ಬುಕ್, ವಾಟ್ಸ್ಯಾಪ್, ಯೂಟ್ಯೂಬ್ ಚಾನಲ್ ಸೇರಿದಂತೆ ಎಲ್ಲಾ ಮುದ್ರಣ, ದೃಶ್ಯ ಹಾಗೂ ಸಾಮಾಜಿಕ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ನೀಡಿದೆ.
ಅಲ್ಲದೆ, ಪ್ರಕರಣದ ಸಂಬಂಧ ಎಲ್ಲಾ 50 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿದೆ.
ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ ;
ಅರ್ಜಿದಾರರ ಪರ ವಾದ ಆಲಿಸಿದ ಬಳಿಕ ನ್ಯಾಯಾಲಯ, ''ಮುಂದಿನ ಅದೇಶದವರೆಗೆ ಅರ್ಜಿದಾರರ ವಿರುದ್ಧ ಅವಹೇಳನಕಾರಿ ಅಥವಾ ಮಾನಹಾನಿಯಾಗುವಂತಹ ಯಾವುದೇ ರೀತಿಯ ಸುದ್ದಿ, ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ'' ಎಂದು ಆದೇಶಿಸಿದೆ.
ಅರ್ಜಿದಾರರು ಸಲ್ಲಿಸಿರುವ ಮಾಹಿತಿ ಗಮನಿಸಿದರೆ ಮೇಲ್ನೋಟಕ್ಕೆ ಮಾಧ್ಯಮಗಳು ಅವರ ವಿರುದ್ಧ ಮಾನಹಾನಿಕಾರ ವರದಿ, ವಿಡಿಯೋಗಳನ್ನು ಪ್ರಸಾರ ಮಾಡುವ
ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಸುಪ್ರೀಂಕೋರ್ಟ್ನ ಹಲವು ತೀರ್ಪುಗಳ ಆಧಾರದಲ್ಲಿಈ ನಿರ್ಬಂಧ ಆದೇಶ ಹೊರಡಿಸಲಾಗುತ್ತಿದೆ, ಎಂದು ನ್ಯಾಯಾಲಯ ಹೇಳಿದೆ.
ಅರ್ಜಿದಾರರರ ಪರ ವಕೀಲರು, 'ಲೋಕಸಭಾ ಚುನಾವಣೆ ಸಮಯದಲ್ಲಿ ಉದ್ದೇಶಪೂರ್ವಕವಾಗಿಯೇ ಅವರ ಹೆಸರಿಗೆ ಮಸಿ ಬಳಿಯಲು ಪ್ರಯತ್ನ ನಡೆಸಲಾಗುತ್ತಿದೆ. ಹಾಗಾಗಿ, ಯಾವುದೇ ರೀತಿಯ ಆಶ್ಲೀಲ ಆಡಿಯೋ, ವಿಡಿಯೋ, ಪೋಟೊಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು ' ಎಂದು ನ್ಯಾಯಾಲಯವನ್ನು ಕೋರಿದ್ದರು.
Eshwarappa son Kantesh gets injunction order against 50 media houses in Bengaluru over his sex cd case. son of now-expelled BJP leader KS Eshwarappa, has obtained a temporary injunction order from a Bengaluru court, preventing the media from publishing or broadcasting any explicit images or videos pertaining to him.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm