ಬ್ರೇಕಿಂಗ್ ನ್ಯೂಸ್
01-05-24 01:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1: ಅಶ್ಲೀಲ ಸಿಡಿ ಭೀತಿ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿಯಾಗುವಂತಹ ವರದಿ, ದೃಶ್ಯ, ಪೋಟೋ ಸೇರಿದಂತೆ ಯಾವುದೇ ರೀತಿಯ ಸುದ್ದಿಗಳನ್ನು ಪ್ರಕಟಿಸದಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್ ನಗರದ ನ್ಯಾಯಾಲಯದಿಂದ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ಪಡೆದಿದ್ದಾರೆ.
ಕಾಂತೇಶ್ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ಸಿಸಿಎಚ್ 11ನೇ ನ್ಯಾಯಾಲಯ ಇಂಟರ್ನೆಟ್, ಫೇಸ್ಬುಕ್, ವಾಟ್ಸ್ಯಾಪ್, ಯೂಟ್ಯೂಬ್ ಚಾನಲ್ ಸೇರಿದಂತೆ ಎಲ್ಲಾ ಮುದ್ರಣ, ದೃಶ್ಯ ಹಾಗೂ ಸಾಮಾಜಿಕ ಮಾಧ್ಯಮಗಳ ವಿರುದ್ಧ ನಿರ್ಬಂಧ ಆದೇಶ ನೀಡಿದೆ.
ಅಲ್ಲದೆ, ಪ್ರಕರಣದ ಸಂಬಂಧ ಎಲ್ಲಾ 50 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿದೆ.
ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ ;
ಅರ್ಜಿದಾರರ ಪರ ವಾದ ಆಲಿಸಿದ ಬಳಿಕ ನ್ಯಾಯಾಲಯ, ''ಮುಂದಿನ ಅದೇಶದವರೆಗೆ ಅರ್ಜಿದಾರರ ವಿರುದ್ಧ ಅವಹೇಳನಕಾರಿ ಅಥವಾ ಮಾನಹಾನಿಯಾಗುವಂತಹ ಯಾವುದೇ ರೀತಿಯ ಸುದ್ದಿ, ಪೋಟೊ, ದೃಶ್ಯಗಳನ್ನು ಪ್ರಸಾರ ಮಾಡುವಂತಿಲ್ಲ'' ಎಂದು ಆದೇಶಿಸಿದೆ.
ಅರ್ಜಿದಾರರು ಸಲ್ಲಿಸಿರುವ ಮಾಹಿತಿ ಗಮನಿಸಿದರೆ ಮೇಲ್ನೋಟಕ್ಕೆ ಮಾಧ್ಯಮಗಳು ಅವರ ವಿರುದ್ಧ ಮಾನಹಾನಿಕಾರ ವರದಿ, ವಿಡಿಯೋಗಳನ್ನು ಪ್ರಸಾರ ಮಾಡುವ
ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಸುಪ್ರೀಂಕೋರ್ಟ್ನ ಹಲವು ತೀರ್ಪುಗಳ ಆಧಾರದಲ್ಲಿಈ ನಿರ್ಬಂಧ ಆದೇಶ ಹೊರಡಿಸಲಾಗುತ್ತಿದೆ, ಎಂದು ನ್ಯಾಯಾಲಯ ಹೇಳಿದೆ.
ಅರ್ಜಿದಾರರರ ಪರ ವಕೀಲರು, 'ಲೋಕಸಭಾ ಚುನಾವಣೆ ಸಮಯದಲ್ಲಿ ಉದ್ದೇಶಪೂರ್ವಕವಾಗಿಯೇ ಅವರ ಹೆಸರಿಗೆ ಮಸಿ ಬಳಿಯಲು ಪ್ರಯತ್ನ ನಡೆಸಲಾಗುತ್ತಿದೆ. ಹಾಗಾಗಿ, ಯಾವುದೇ ರೀತಿಯ ಆಶ್ಲೀಲ ಆಡಿಯೋ, ವಿಡಿಯೋ, ಪೋಟೊಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು ' ಎಂದು ನ್ಯಾಯಾಲಯವನ್ನು ಕೋರಿದ್ದರು.
Eshwarappa son Kantesh gets injunction order against 50 media houses in Bengaluru over his sex cd case. son of now-expelled BJP leader KS Eshwarappa, has obtained a temporary injunction order from a Bengaluru court, preventing the media from publishing or broadcasting any explicit images or videos pertaining to him.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm