ಬ್ರೇಕಿಂಗ್ ನ್ಯೂಸ್
01-05-24 03:00 pm HK News Desk ಕರ್ನಾಟಕ
ಹಾಸನ, ಮೇ 1: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕು ಪಡೆದುಕೊಳ್ಳುತ್ತಿದ್ದಂತೆ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಹೋಮ, ಹವನ ನಡೆದಿದೆ.
ರೇವಣ್ಣ ಪುತ್ರನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಕರಣದ ತನಿಖೆ ಎಸ್ಐಟಿಗೆ ವರ್ಗಾವಣೆಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೂಡ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಎಚ್ಡಿ ರೇವಣ್ಣ ಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
ಪೆನ್ಡ್ರೈವ್ ವಿಚಾರ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ. ಸದ್ಯ ತನಿಖೆಯ ಭಾಗವಾಗಿ ಎಸ್ಐಟಿ ಪ್ರಜ್ವಲ್ ರೇವಣ್ಣಾಗೆ ಬುಲಾವ್ ನೋಟೀಸ್ ನೀಡಿದೆ. ಹೀಗಾಗಿ ಮೇ ಮೂರರಂದು ಪ್ರಜ್ವಲ್ ವಾಪಾಸ್ಸಾಗಲಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಎಚ್ಡಿ ರೇವಣ್ಣ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ಹೀಗಾಗಿ ರೇವಣ್ಣ ಹೊಳೆನರಸೀಪುರದ ಮನೆಯಲ್ಲಿ ಹೋಮ, ಹವನ ನೆರವೇರಿಸಿದ್ದಾರೆ.
ಮನೆಯಲ್ಲಿ ಹೋಮ ಕುಂಡ ನಿರ್ಮಿಸಿ ಹೋಮ-ಹವನ ಮಾತ್ರವಲ್ಲದೆ, ಬೆಳಗ್ಗೆಯಿಂದಲೇ ವಿವಿಧ ಪೂಜೆಯನ್ನೂ ಮಾಡಿಸಿದ್ದಾರೆ. ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಎಚ್ಡಿ ರೇವಣ್ಣ ಹೊಳೆನರಸೀಪುರಕ್ಕೆ ಆಗಮಿಸಿದ್ದರು. ಇಂದು ಮುಂಜಾನೆ ಮಾವಿನ ಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವೇಶ್ವರ, ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ಮಾಡಿಸಿದರು.
Prajwal Revanna sex case, family offers prayers and Pooja to overcome problem at Hassan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm