ಬ್ರೇಕಿಂಗ್ ನ್ಯೂಸ್
01-05-24 03:00 pm HK News Desk ಕರ್ನಾಟಕ
ಹಾಸನ, ಮೇ 1: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಚುರುಕು ಪಡೆದುಕೊಳ್ಳುತ್ತಿದ್ದಂತೆ ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್ಡಿ ರೇವಣ್ಣ ದೇವರ ಮೊರೆ ಹೋಗಿದ್ದಾರೆ. ಬೆಳಿಗ್ಗೆಯಿಂದ ಅವರ ಮನೆಯಲ್ಲಿ ಹೋಮ, ಹವನ ನಡೆದಿದೆ.
ರೇವಣ್ಣ ಪುತ್ರನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಕರಣದ ತನಿಖೆ ಎಸ್ಐಟಿಗೆ ವರ್ಗಾವಣೆಯಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಕೂಡ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಎಚ್ಡಿ ರೇವಣ್ಣ ಮನೆಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿವೆ.
ಪೆನ್ಡ್ರೈವ್ ವಿಚಾರ ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ. ಸದ್ಯ ತನಿಖೆಯ ಭಾಗವಾಗಿ ಎಸ್ಐಟಿ ಪ್ರಜ್ವಲ್ ರೇವಣ್ಣಾಗೆ ಬುಲಾವ್ ನೋಟೀಸ್ ನೀಡಿದೆ. ಹೀಗಾಗಿ ಮೇ ಮೂರರಂದು ಪ್ರಜ್ವಲ್ ವಾಪಾಸ್ಸಾಗಲಿದ್ದಾರೆ. ಈ ಎಲ್ಲಾ ಬೆಳವಣಿಗಳ ನಡುವೆ ಎಚ್ಡಿ ರೇವಣ್ಣ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗಿದೆ. ಹೀಗಾಗಿ ರೇವಣ್ಣ ಹೊಳೆನರಸೀಪುರದ ಮನೆಯಲ್ಲಿ ಹೋಮ, ಹವನ ನೆರವೇರಿಸಿದ್ದಾರೆ.
ಮನೆಯಲ್ಲಿ ಹೋಮ ಕುಂಡ ನಿರ್ಮಿಸಿ ಹೋಮ-ಹವನ ಮಾತ್ರವಲ್ಲದೆ, ಬೆಳಗ್ಗೆಯಿಂದಲೇ ವಿವಿಧ ಪೂಜೆಯನ್ನೂ ಮಾಡಿಸಿದ್ದಾರೆ. ಮಂಗಳವಾರ ತಡರಾತ್ರಿ ಬೆಂಗಳೂರಿನಿಂದ ಎಚ್ಡಿ ರೇವಣ್ಣ ಹೊಳೆನರಸೀಪುರಕ್ಕೆ ಆಗಮಿಸಿದ್ದರು. ಇಂದು ಮುಂಜಾನೆ ಮಾವಿನ ಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವೇಶ್ವರ, ಲಕ್ಷ್ಮಿ ನರಸಿಂಹ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಮನೆಯಲ್ಲಿ ವಿಶೇಷ ಪೂಜೆ ಮಾಡಿಸಿದರು.
Prajwal Revanna sex case, family offers prayers and Pooja to overcome problem at Hassan.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm