ಬ್ರೇಕಿಂಗ್ ನ್ಯೂಸ್
02-05-24 01:30 pm HK News Desk ಕರ್ನಾಟಕ
ಕಲಬುರಗಿ, ಮೇ 2: ಪ್ರಜ್ವಲ್ ರೇವಣ್ಣ ಕುರಿತ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ. 41(a) ಸೆಕ್ಷನ್ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಇದರಂತೆ, 24 ಗಂಟೆಯ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇಲ್ಲದೇ ಇದ್ದಲ್ಲಿ ರೇವಣ್ಣ ಅವರನ್ನು ಬಂಧಿಸಬೇಕಾಗುತ್ತೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಹಾಜರಾಗದೆ ಇದ್ರೆ ರೇವಣ್ಣ ಅವರನ್ನ ಬಂಧಿಸಬೇಕಾಗುತ್ತೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೇರಳಿದ ಹಿನ್ನಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಈ ಪ್ರಕರಣದಲ್ಲಿ ಸಮಯ ಕೋಡೊದಕ್ಕೆ ಸಾಧ್ಯ ಇಲ್ಲ. ಹಾಗಾಗಿ ಅವರನ್ನು ಅರೆಸ್ಟ್ ಮಾಡಲು ಎಸ್ಐಟಿ ಕ್ರಮ ಕೈಗೊಳ್ಳುತ್ತದೆ ಎಂದರು.
ಕಲಬುರಗಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಗೃಹ ಸಚಿವರು, ಪ್ರಜ್ವಲ್ ರೇವಣ್ಣನ ಕೇಸ್ ರಾಷ್ಟ್ರ ಮಟ್ಟದಲ್ಲಿ ಚರ್ಚೆ ಆಗ್ತಿದೆ. ಇತರೆ ರಾಷ್ಟ್ರಗಳಿಗೂ ಈ ವಿಷಯ ತಲುಪಿದೆ. ನೂರಾರು ಜನ ಮಹಿಳೆಯರಿಗೆ ಅನ್ಯಾಯ ಆಗಿದೆ. ಹಿಂದೆ ನಮ್ಮ ಗಮನಕ್ಕೆ ಬಂದಿಲ್ವಾ ಅಂತಾ ನೀವು ಕೇಳಬಹುದು. ಆದ್ರೆ ದೂರು ಯಾರು ನೀಡಿರಲಿಲ್ಲ. ಮಹಿಳಾ ಆಯೋಗದ ಗಮನಕ್ಕೆ ಬಂದ ತಕ್ಷಣ ದೂರು ನೀಡಿದ್ದಾರೆ. ತಕ್ಷಣ ಎಸ್ ಐ ಟಿ ರಚನೆ ಮಾಡಿ ತನಿಖೆ ಮಾಡ್ತಿದ್ದೇವೆ. ದೂರು ದಾಖಲಾಗ್ತಿದ್ದ ಹಾಗೆ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ.
ಹೊರ ದೇಶಕ್ಕೆ ಹೋಗುವಾಗ ಅವರಿಗೆ ಕೇಂದ್ರ ಸರ್ಕಾರ ಡಿಪ್ಲೋಮೇಟಿಕ್ ಪಾಸ್ ಪೋರ್ಟ್ ಕೊಟ್ಟಿದೆ. ಡಿಪ್ಲೊಮೇಟಿಕ್ ಪಾಸ್ ಪೋರ್ಟ್ ಬಗ್ಗೆ ಹೆಚ್ಚಿನ ಪ್ರಶ್ನೆ ಮಾಡಲ್ಲ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ. ಇಬ್ಬರು ಮಹಿಳೆಯರು ದೂರು ದಾಖಲು ಮಾಡಿದ್ದಾರೆ. ಸಾವಿರಾರು ಜನ ಮಹಿಳೆಯರು ಈ ವಿಡಿಯೋದಲ್ಲಿ ಇದ್ದಾರೆ. ಹಾಗಾಗಿ ಈ ಕೇಸ್ ಹೇಗ ಬೇಕಾದ್ರು ಮಾಡೋದಕ್ಕೆ ಆಗೋದಿಲ್ಲ. ಮಹಿಳೆಯರ ಕುಟುಂಬದ ಬಗ್ಗೆಯೂ ನಾವು ಆಲೋಚನೆ ಮಾಡಬೇಕಾಗುತ್ತೆ ಎಂದರು.
A lookout notice was issued against incumbent JD(S) MP Prajwal Revanna by the Special Investigation Team (SIT) probing the Hassan sex scandal, sources said on Thursday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm