ಬ್ರೇಕಿಂಗ್ ನ್ಯೂಸ್
02-05-24 01:30 pm HK News Desk ಕರ್ನಾಟಕ
ಕಲಬುರಗಿ, ಮೇ 2: ಪ್ರಜ್ವಲ್ ರೇವಣ್ಣ ಕುರಿತ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ. 41(a) ಸೆಕ್ಷನ್ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಇದರಂತೆ, 24 ಗಂಟೆಯ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇಲ್ಲದೇ ಇದ್ದಲ್ಲಿ ರೇವಣ್ಣ ಅವರನ್ನು ಬಂಧಿಸಬೇಕಾಗುತ್ತೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಹಾಜರಾಗದೆ ಇದ್ರೆ ರೇವಣ್ಣ ಅವರನ್ನ ಬಂಧಿಸಬೇಕಾಗುತ್ತೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೇರಳಿದ ಹಿನ್ನಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಈ ಪ್ರಕರಣದಲ್ಲಿ ಸಮಯ ಕೋಡೊದಕ್ಕೆ ಸಾಧ್ಯ ಇಲ್ಲ. ಹಾಗಾಗಿ ಅವರನ್ನು ಅರೆಸ್ಟ್ ಮಾಡಲು ಎಸ್ಐಟಿ ಕ್ರಮ ಕೈಗೊಳ್ಳುತ್ತದೆ ಎಂದರು.
ಕಲಬುರಗಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಗೃಹ ಸಚಿವರು, ಪ್ರಜ್ವಲ್ ರೇವಣ್ಣನ ಕೇಸ್ ರಾಷ್ಟ್ರ ಮಟ್ಟದಲ್ಲಿ ಚರ್ಚೆ ಆಗ್ತಿದೆ. ಇತರೆ ರಾಷ್ಟ್ರಗಳಿಗೂ ಈ ವಿಷಯ ತಲುಪಿದೆ. ನೂರಾರು ಜನ ಮಹಿಳೆಯರಿಗೆ ಅನ್ಯಾಯ ಆಗಿದೆ. ಹಿಂದೆ ನಮ್ಮ ಗಮನಕ್ಕೆ ಬಂದಿಲ್ವಾ ಅಂತಾ ನೀವು ಕೇಳಬಹುದು. ಆದ್ರೆ ದೂರು ಯಾರು ನೀಡಿರಲಿಲ್ಲ. ಮಹಿಳಾ ಆಯೋಗದ ಗಮನಕ್ಕೆ ಬಂದ ತಕ್ಷಣ ದೂರು ನೀಡಿದ್ದಾರೆ. ತಕ್ಷಣ ಎಸ್ ಐ ಟಿ ರಚನೆ ಮಾಡಿ ತನಿಖೆ ಮಾಡ್ತಿದ್ದೇವೆ. ದೂರು ದಾಖಲಾಗ್ತಿದ್ದ ಹಾಗೆ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ.
ಹೊರ ದೇಶಕ್ಕೆ ಹೋಗುವಾಗ ಅವರಿಗೆ ಕೇಂದ್ರ ಸರ್ಕಾರ ಡಿಪ್ಲೋಮೇಟಿಕ್ ಪಾಸ್ ಪೋರ್ಟ್ ಕೊಟ್ಟಿದೆ. ಡಿಪ್ಲೊಮೇಟಿಕ್ ಪಾಸ್ ಪೋರ್ಟ್ ಬಗ್ಗೆ ಹೆಚ್ಚಿನ ಪ್ರಶ್ನೆ ಮಾಡಲ್ಲ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ. ಇಬ್ಬರು ಮಹಿಳೆಯರು ದೂರು ದಾಖಲು ಮಾಡಿದ್ದಾರೆ. ಸಾವಿರಾರು ಜನ ಮಹಿಳೆಯರು ಈ ವಿಡಿಯೋದಲ್ಲಿ ಇದ್ದಾರೆ. ಹಾಗಾಗಿ ಈ ಕೇಸ್ ಹೇಗ ಬೇಕಾದ್ರು ಮಾಡೋದಕ್ಕೆ ಆಗೋದಿಲ್ಲ. ಮಹಿಳೆಯರ ಕುಟುಂಬದ ಬಗ್ಗೆಯೂ ನಾವು ಆಲೋಚನೆ ಮಾಡಬೇಕಾಗುತ್ತೆ ಎಂದರು.
A lookout notice was issued against incumbent JD(S) MP Prajwal Revanna by the Special Investigation Team (SIT) probing the Hassan sex scandal, sources said on Thursday.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm