ಬ್ರೇಕಿಂಗ್ ನ್ಯೂಸ್
02-05-24 01:30 pm HK News Desk ಕರ್ನಾಟಕ
ಕಲಬುರಗಿ, ಮೇ 2: ಪ್ರಜ್ವಲ್ ರೇವಣ್ಣ ಕುರಿತ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ. 41(a) ಸೆಕ್ಷನ್ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಇದರಂತೆ, 24 ಗಂಟೆಯ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇಲ್ಲದೇ ಇದ್ದಲ್ಲಿ ರೇವಣ್ಣ ಅವರನ್ನು ಬಂಧಿಸಬೇಕಾಗುತ್ತೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಹಾಜರಾಗದೆ ಇದ್ರೆ ರೇವಣ್ಣ ಅವರನ್ನ ಬಂಧಿಸಬೇಕಾಗುತ್ತೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೇರಳಿದ ಹಿನ್ನಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಈ ಪ್ರಕರಣದಲ್ಲಿ ಸಮಯ ಕೋಡೊದಕ್ಕೆ ಸಾಧ್ಯ ಇಲ್ಲ. ಹಾಗಾಗಿ ಅವರನ್ನು ಅರೆಸ್ಟ್ ಮಾಡಲು ಎಸ್ಐಟಿ ಕ್ರಮ ಕೈಗೊಳ್ಳುತ್ತದೆ ಎಂದರು.
ಕಲಬುರಗಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಗೃಹ ಸಚಿವರು, ಪ್ರಜ್ವಲ್ ರೇವಣ್ಣನ ಕೇಸ್ ರಾಷ್ಟ್ರ ಮಟ್ಟದಲ್ಲಿ ಚರ್ಚೆ ಆಗ್ತಿದೆ. ಇತರೆ ರಾಷ್ಟ್ರಗಳಿಗೂ ಈ ವಿಷಯ ತಲುಪಿದೆ. ನೂರಾರು ಜನ ಮಹಿಳೆಯರಿಗೆ ಅನ್ಯಾಯ ಆಗಿದೆ. ಹಿಂದೆ ನಮ್ಮ ಗಮನಕ್ಕೆ ಬಂದಿಲ್ವಾ ಅಂತಾ ನೀವು ಕೇಳಬಹುದು. ಆದ್ರೆ ದೂರು ಯಾರು ನೀಡಿರಲಿಲ್ಲ. ಮಹಿಳಾ ಆಯೋಗದ ಗಮನಕ್ಕೆ ಬಂದ ತಕ್ಷಣ ದೂರು ನೀಡಿದ್ದಾರೆ. ತಕ್ಷಣ ಎಸ್ ಐ ಟಿ ರಚನೆ ಮಾಡಿ ತನಿಖೆ ಮಾಡ್ತಿದ್ದೇವೆ. ದೂರು ದಾಖಲಾಗ್ತಿದ್ದ ಹಾಗೆ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ.
ಹೊರ ದೇಶಕ್ಕೆ ಹೋಗುವಾಗ ಅವರಿಗೆ ಕೇಂದ್ರ ಸರ್ಕಾರ ಡಿಪ್ಲೋಮೇಟಿಕ್ ಪಾಸ್ ಪೋರ್ಟ್ ಕೊಟ್ಟಿದೆ. ಡಿಪ್ಲೊಮೇಟಿಕ್ ಪಾಸ್ ಪೋರ್ಟ್ ಬಗ್ಗೆ ಹೆಚ್ಚಿನ ಪ್ರಶ್ನೆ ಮಾಡಲ್ಲ. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ. ಇಬ್ಬರು ಮಹಿಳೆಯರು ದೂರು ದಾಖಲು ಮಾಡಿದ್ದಾರೆ. ಸಾವಿರಾರು ಜನ ಮಹಿಳೆಯರು ಈ ವಿಡಿಯೋದಲ್ಲಿ ಇದ್ದಾರೆ. ಹಾಗಾಗಿ ಈ ಕೇಸ್ ಹೇಗ ಬೇಕಾದ್ರು ಮಾಡೋದಕ್ಕೆ ಆಗೋದಿಲ್ಲ. ಮಹಿಳೆಯರ ಕುಟುಂಬದ ಬಗ್ಗೆಯೂ ನಾವು ಆಲೋಚನೆ ಮಾಡಬೇಕಾಗುತ್ತೆ ಎಂದರು.
A lookout notice was issued against incumbent JD(S) MP Prajwal Revanna by the Special Investigation Team (SIT) probing the Hassan sex scandal, sources said on Thursday.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm