ಬ್ರೇಕಿಂಗ್ ನ್ಯೂಸ್
02-05-24 09:18 pm HK News Desk ಕರ್ನಾಟಕ
ಶಿವಮೊಗ್ಗ, ಮೇ.2: ಕಾಂಗ್ರೆಸ್ ಸಮಾವೇಶದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಜ್ವಲ್ ರೇವಣ್ಣ 400ಕ್ಕೂ ಅಧಿಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.
ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರು, ಪ್ರಜ್ವಲ್ ಬಗ್ಗೆ ಸಮರ್ಥನೆ ಮಾಡಿಕೊಂಡು, ಅವರಿಗೆ ಮತ ಹಾಕಿದ್ರೆ ನನಗೆ ವೋಟ್ ಹಾಕಿದಂತೆ ಅಂತಿದ್ದಾರೆ. ಪ್ರಜ್ವಲ್ ಮಾಡಿರೋದರ ಬಗ್ಗೆ ಪ್ರಧಾನಿಗಳಿಗೂ ಗೊತ್ತಿತ್ತು. ಬಿಜೆಪಿಯ ಪ್ರತಿ ನಾಯಕರಿಗೂ ಗೊತ್ತಿತ್ತು. ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ಎಂದು ರಾಹುಲ್ ಗಾಂಧಿ ಗುಡುಗಿದರು.
ಪ್ರಜ್ವಲ್ ಪರವಾಗಿ ಒಂದೇ ವೇದಿಕೆಯಲ್ಲಿ ಮೋದಿ ಪ್ರಚಾರ ಮಾಡಿದ್ದಾರೆ. ಅದಕ್ಕಾಗಿ ದೇಶದ ಮಹಿಳೆಯರಲ್ಲಿ ಮೋದಿ, ಗೃಹ ಸಚಿವ ಅಮಿತ್ ಶಾ ಎಲ್ಲಾ ಮಹಿಳೆಯರ ಮುಂದೆ ತಲೆಬಾಗಿ ಕ್ಷಮೆ ಕೇಳಬೇಕು ಎಂದು ರಾಹುಲ್ ಗಾಂಧಿ ಗುಡುಗಿದರು.
ಇಂತಹ ಘಟನೆಯನ್ನು ನಾವು ಇಡೀ ಜಗತ್ತಲ್ಲೇ ನೋಡಿಲ್ಲ. ಇಡೀ ಪ್ರಪಂಚದಲ್ಲಿ ಚರ್ಚೆ ಆಗುತ್ತಿದೆ. ಮಾಸ್ ರೇಪಿಸ್ಟ್ ಜೊತೆ ಮೋದಿ ವೇದಿಕೆ ಹಂಚಿಕೊಂಡು ಮತ ಯಾಚನೆ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಮಾಸ್ ರೇಪಿಸ್ಟ್ ಪರ ಮೋದಿ ಪ್ರಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಮೋದಿಯವರ ಗ್ಯಾರಂಟಿ, ಒಬ್ಬ ಮಾಸ್ ರೇಪಿಸ್ಟ್ಗೆ ರೇಪ್ನ ಗ್ಯಾರಂಟಿ. ದೇಶದಿಂದ ಅವನನ್ನು ಹೊರಗೆ ಹೋಗಲು ಮೋದಿ ಅವಕಾಶ ಕೊಟ್ಟಿದ್ದಾರೆ. ಅವರ ಬಳಿ ಸಿಬಿಐ ಸೇರಿ ಎಲ್ಲವೂ ಅಧಿಕಾರ ಇದೆ. ಆದರೂ ಇಂತಹ ರೇಪಿಸ್ಟ್ ನನ್ನು ದೇಶದಿಂದ ಹೊರಗೆ ಹೋಗಲು ಬಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್ ನಿಂದ ಇಂತಹವರ ವಿರುದ್ಧ ಕ್ರಮ ಸಾಧ್ಯ. ಅದಕ್ಕಾಗಿ ಇವಾಗ ನೀವು ಒಂದು ತೀರ್ಮಾನ ಮಾಡಿ ನಮಗೆ ಆಶೀರ್ವಾದ ಮಾಡಬೇಕು. ಮಾಸ್ ರೇಪಿಸ್ಟ್ ವಿದೇಶಕ್ಕೆ ಒಡಿಹೋಗಲು ಬಿಜೆಪಿಯವರೇ ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದರು.
Prajwal Revanna mass rapist of 400 women, Rahul Gandhi slams Modi in Shivamogga. Prajwal Revanna has raped 400 women and made videos. This is not a sex scandal but mass rape. And the Prime Minister, in front of the people of Karnataka, was supporting and seeking vote for this mass rapist. He is saying that if you vote for this mass rapist, it would help him," Rahul Gandhi said at a public rally in Karnataka's Shivamogga.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am