ಬ್ರೇಕಿಂಗ್ ನ್ಯೂಸ್
02-05-24 09:18 pm HK News Desk ಕರ್ನಾಟಕ
ಶಿವಮೊಗ್ಗ, ಮೇ.2: ಕಾಂಗ್ರೆಸ್ ಸಮಾವೇಶದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಜ್ವಲ್ ರೇವಣ್ಣ 400ಕ್ಕೂ ಅಧಿಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.
ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರು, ಪ್ರಜ್ವಲ್ ಬಗ್ಗೆ ಸಮರ್ಥನೆ ಮಾಡಿಕೊಂಡು, ಅವರಿಗೆ ಮತ ಹಾಕಿದ್ರೆ ನನಗೆ ವೋಟ್ ಹಾಕಿದಂತೆ ಅಂತಿದ್ದಾರೆ. ಪ್ರಜ್ವಲ್ ಮಾಡಿರೋದರ ಬಗ್ಗೆ ಪ್ರಧಾನಿಗಳಿಗೂ ಗೊತ್ತಿತ್ತು. ಬಿಜೆಪಿಯ ಪ್ರತಿ ನಾಯಕರಿಗೂ ಗೊತ್ತಿತ್ತು. ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ಎಂದು ರಾಹುಲ್ ಗಾಂಧಿ ಗುಡುಗಿದರು.
ಪ್ರಜ್ವಲ್ ಪರವಾಗಿ ಒಂದೇ ವೇದಿಕೆಯಲ್ಲಿ ಮೋದಿ ಪ್ರಚಾರ ಮಾಡಿದ್ದಾರೆ. ಅದಕ್ಕಾಗಿ ದೇಶದ ಮಹಿಳೆಯರಲ್ಲಿ ಮೋದಿ, ಗೃಹ ಸಚಿವ ಅಮಿತ್ ಶಾ ಎಲ್ಲಾ ಮಹಿಳೆಯರ ಮುಂದೆ ತಲೆಬಾಗಿ ಕ್ಷಮೆ ಕೇಳಬೇಕು ಎಂದು ರಾಹುಲ್ ಗಾಂಧಿ ಗುಡುಗಿದರು.


ಇಂತಹ ಘಟನೆಯನ್ನು ನಾವು ಇಡೀ ಜಗತ್ತಲ್ಲೇ ನೋಡಿಲ್ಲ. ಇಡೀ ಪ್ರಪಂಚದಲ್ಲಿ ಚರ್ಚೆ ಆಗುತ್ತಿದೆ. ಮಾಸ್ ರೇಪಿಸ್ಟ್ ಜೊತೆ ಮೋದಿ ವೇದಿಕೆ ಹಂಚಿಕೊಂಡು ಮತ ಯಾಚನೆ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಮಾಸ್ ರೇಪಿಸ್ಟ್ ಪರ ಮೋದಿ ಪ್ರಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಮೋದಿಯವರ ಗ್ಯಾರಂಟಿ, ಒಬ್ಬ ಮಾಸ್ ರೇಪಿಸ್ಟ್ಗೆ ರೇಪ್ನ ಗ್ಯಾರಂಟಿ. ದೇಶದಿಂದ ಅವನನ್ನು ಹೊರಗೆ ಹೋಗಲು ಮೋದಿ ಅವಕಾಶ ಕೊಟ್ಟಿದ್ದಾರೆ. ಅವರ ಬಳಿ ಸಿಬಿಐ ಸೇರಿ ಎಲ್ಲವೂ ಅಧಿಕಾರ ಇದೆ. ಆದರೂ ಇಂತಹ ರೇಪಿಸ್ಟ್ ನನ್ನು ದೇಶದಿಂದ ಹೊರಗೆ ಹೋಗಲು ಬಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್ ನಿಂದ ಇಂತಹವರ ವಿರುದ್ಧ ಕ್ರಮ ಸಾಧ್ಯ. ಅದಕ್ಕಾಗಿ ಇವಾಗ ನೀವು ಒಂದು ತೀರ್ಮಾನ ಮಾಡಿ ನಮಗೆ ಆಶೀರ್ವಾದ ಮಾಡಬೇಕು. ಮಾಸ್ ರೇಪಿಸ್ಟ್ ವಿದೇಶಕ್ಕೆ ಒಡಿಹೋಗಲು ಬಿಜೆಪಿಯವರೇ ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದರು.
Prajwal Revanna mass rapist of 400 women, Rahul Gandhi slams Modi in Shivamogga. Prajwal Revanna has raped 400 women and made videos. This is not a sex scandal but mass rape. And the Prime Minister, in front of the people of Karnataka, was supporting and seeking vote for this mass rapist. He is saying that if you vote for this mass rapist, it would help him," Rahul Gandhi said at a public rally in Karnataka's Shivamogga.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm