ಬ್ರೇಕಿಂಗ್ ನ್ಯೂಸ್
03-05-24 04:29 pm HK News Desk ಕರ್ನಾಟಕ
ಮೈಸೂರು, ಮೇ.3: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂಕಷ್ಟಕ್ಕೀಡಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.
ಕೆಆರ್ ನಗರ ಠಾಣೆಗೆ ದೂರು ನೀಡಿದ್ದು ಅಶ್ಲೀಲ ವಿಡಿಯೊದಲ್ಲಿ ತನ್ನ ತಾಯಿ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಆಕೆಯ ಪುತ್ರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದಾಗಿದ್ದಾರೆ. ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿ ಚಿತ್ರವೂ ಇದೆ. ವಿಡಿಯೋ ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಅನ್ವಯ ಹೆಚ್ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A, 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ರೇವಣ್ಣರನ್ನು ಆರೋಪಿ ಸಂಖ್ಯೆ 1 ಹಾಗೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದು ನಮೂದಿಸಲಾಗಿದೆ.
ಈ ಮಧ್ಯೆ, ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಹೊಳೆನರಸೀಪುರದ ಚೆನ್ನಾಂಬಿಕಾ ಥಿಯೇಟರ್ ಪಕ್ಕದ ಮನೆಯಲ್ಲಿ ಮಹಿಳೆ ಸುಮಾರು 6 ವರ್ಷ ಕೆಲಸ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲೇ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ಸತೀಶ್ ಎಂಬವರು, ಭವಾನಿ ರೇವಣ್ಣ ಕರೆಯುತ್ತಿದ್ದಾರೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ರೇವಣ್ಣ ತೋಟದ ಮನೆಗಳಿಗೆ ಎಸ್ಐಟಿ ದಾಳಿ
ಇದೇ ವೇಳೆ, ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ ಬೆಂಗಳೂರು ಹಾಗೂ ಹಾಸನ ಜಿಲ್ಲೆಯ ಮನೆಗಳು ಹಾಗೂ ಫಾರಂ ಹೌಸ್ಗಳಿಗೆ ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದೆ.
ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದ್ದು, ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.
Trouble seems to be mounting for former Minister and JD(S) leader H. D. Revanna. He has now been booked for kidnapping one of the alleged victims of sexual abuse by his son Prajwal Revanna, who is the MP of Hassan and the candidate of the BJP-led NDA in this Lok Sabha election.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm