ಬ್ರೇಕಿಂಗ್ ನ್ಯೂಸ್
03-05-24 07:41 pm HK News Desk ಕರ್ನಾಟಕ
ಬಳ್ಳಾರಿ, ಮೇ.03: ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದ್ದು, ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಈ ದುರಂತ ಸಂಭವಿಸಿದೆ.
ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್ ಎಂಬವರಿಗೆ ಗಂಭೀರ ಗಾಯವಾಗಿದ್ದು, ಮೂವರು ಸಿಬ್ಬಂದಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ಡ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಫಿಲ್ಲಿಂಗ್ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಬ್ರೂಸ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಅಂಗಡಿ ಮತ್ತು ಸುತ್ತಮುತ್ತಲಿನ ಕಿಟಕಿಗಳು ಒಡೆದು ಹೋಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
Air Conditioner Blast reported this evening around 6:30pm in Bellary of Karnataka at Kalyan Jewellers Showroom. Three people seriously injured in the blast. One person is critical. pic.twitter.com/Z3l2WjGPFl
— Aditya Raj Kaul (@AdityaRajKaul) May 2, 2024
Three people were seriously injured following an air conditioner explosion at Kalyan Jewellers store in Karnataka's Bellary. The incident happened on Thursday evening. According to the details, the blast was a result of a malfunction in one of the air conditioners at the store.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm