ಬ್ರೇಕಿಂಗ್ ನ್ಯೂಸ್
03-05-24 10:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಒಂದರ ಮೇಲೊಂದು ಕೇಸು ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ತೀವ್ರ ಸಂಕಷ್ಟಕ್ಕೆ ತುತ್ತಾಗುತ್ತಲೇ ಯಾರ ಕೈಗೂ ಸಿಗದೇ ತಲೆಮರೆಸಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಹಾಸನ ಮತ್ತು ಬೆಂಗಳೂರಿನ ಮನೆಗಳಿಗೆ ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಅಧಿಕಾರಿಗಳು ಬಂಧಿಸುತ್ತಾರೆಂಬ ಭೀತಿಯಲ್ಲಿ ರೇವಣ್ಣ ತಲೆಮರೆಸಿಕೊಂಡಿದ್ದಾರೆ.
ಅತ್ಯಾಚಾರ, ಅಪಹರಣ, ಕಿರುಕುಳ ಆರೋಪದಲ್ಲಿ ತಂದೆ, ಮಗನ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದ್ದು ಎಸ್ಐಟಿ ತನಿಖೆಗೆ ಮಹತ್ತರ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ವಿಡಿಯೋ ಪ್ರಕರಣ ಕುರಿತಂತೆ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ಅವರನ್ನು ವಿಚಾರಣೆ ಮಾಡಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾಕಷ್ಟು ಮಾಹಿತಿ, ಸಾಕ್ಷ್ಯಗಳನ್ನೂ ಕಲೆಹಾಕಿದ್ದಾರೆ. ಈಗಾಗಲೇ ಎಸ್ಐಟಿ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರೂ, ರೇವಣ್ಣ ವಿಚಾರಣೆಗೆ ಬರದೆ ದೂರ ನಿಂತಿದ್ದಾರೆ.
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವುದರಿಂದ ಅವರ ವಿರುದ್ಧ ಲುಕೌಟ್ ನೋಟೀಸ್ ಜಾರಿಯಾಗಿದೆ. ಇದೀಗ ಎಚ್.ಡಿ. ರೇವಣ್ಣ ಕೂಡ ವಿದೇಶಕ್ಕೆ ಪರಾರಿಯಾಗುತ್ತಾರೆ ಎಂಬ ಮುನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದೆ. ಎರಡನೇ ಪ್ರಕರಣ ದಾಖಲಾಗುತ್ತಲೇ ರೇವಣ್ಣ ತಲೆಮರೆಸಿಕೊಂಡಿದ್ದು, ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಇದೇ ವೇಳೆ, ವಿಚಾರಣೆಗೆ ಬರದಿದ್ದರೆ ರೇವಣ್ಣ ಅವರನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿರುವುದು ಆರೋಪಿಗಳಿಗೆ ಬಿಸಿ ಮುಟ್ಟಿಸಿದೆ.
ಮೈಸೂರಿನಲ್ಲಿದ್ದ ಮನೆ ಕೆಲಸದಾಕೆಯನ್ನು ಭವಾನಿ ರೇವಣ್ಣ ಅವರ ಆಪ್ತ ಸತೀಶ್ ಬಾಬು ಎಂಬಾತ ಅಪಹರಿಸಿರುವ ಬಗ್ಗೆಯೂ ಮೈಸೂರು ಜಿಲ್ಲೆಯ ಕೆ.ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ಮಗನೇ ದೂರು ನೀಡಿದ್ದು, ಅಶ್ಲೀಲ ವಿಡಿಯೋದಲ್ಲಿ ತಾಯಿಯದ್ದೂ ಇದೆ. ಮೇ 1ರಂದು ಸತೀಶ್ ಬಾಬು ಮೈಸೂರಿಗೆ ಬಂದು ಭವಾನಿ ರೇವಣ್ಣ ಕರೆದುಕೊಂಡು ಬರಲು ಹೇಳಿದ್ದಾರೆಂದು ತಿಳಿಸಿ ತನ್ನ ತಾಯಿಯನ್ನು ಕರೆದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಹಿಂದೆ ಐದು ವರ್ಷಗಳ ಕಾಲ ಹೊಳೆನರಸೀಪುರದಲ್ಲಿದ್ದಾಗ ಮಹಿಳೆ ರೇವಣ್ಣ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧಿಸಿ ಪೊಲೀಸರು ಸತೀಶ್ ಬಾಬುವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Sex scandal case, HD Revanna chances of flying abroad, lookout notice issued.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm