ಬ್ರೇಕಿಂಗ್ ನ್ಯೂಸ್
04-05-24 07:10 pm HK News Desk ಕರ್ನಾಟಕ
ಮಂಡ್ಯ, ಮೇ.04: ಎಚ್.ಡಿ.ರೇವಣ್ಣನ ವರ್ತನೆ ಸರಿಯಿಲ್ಲ. ಹಿಂದೆ ಲಂಡನ್ ಗೆ ಹೋಗಿದ್ದಾಗ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕಿಕೊಂಡಿದ್ದರು ಎಂದು ಬಿಜೆಪಿ ಮುಖಂಡ, ಮಾಜಿ ಸಂಸದ ಎಲ್. ಆರ್.ಶಿವರಾಮೇಗೌಡ ಹೇಳಿದರು.
ರೇವಣ್ಣ ಒಳ್ಳೆಯ ನಡವಳಿಕೆಯ ವ್ಯಕ್ತಿಯಲ್ಲ. ಪ್ರಜ್ವಲ್ ರೇವಣ್ಣ ಇಷ್ಟೊಂದು ದೌರ್ಜನ್ಯ ನಡೆಸುತ್ತಿದ್ದರೂ ಅವರ ಅಪ್ಪ, ಅಮ್ಮ ನೋಡಿಕೊಂಡು ಕತ್ತೆ ಕಾಯ್ತಿದ್ರಾ? ಇಂತಹ ವಿಕೃತ ಮನಸ್ಥಿತಿಯವರನ್ನು ನಾನು ಎಲ್ಲಿಯೂ ನೋಡೇ ಇಲ್ಲ. ಪ್ರಜ್ವಲ್ ಮುಂದೆ ಉಮೇಶ್ ರೆಡ್ಡಿಯೂ ಏನು ಇಲ್ಲ ಎಂದು ಹೇಳಿದರು. ಕೂಡಲೇ ಸರ್ಕಾರ ಸೂಕ್ತ ತನಿಖೆ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಸಂತ್ರಸ್ತೆಯರಿಗೆ ನ್ಯಾಯ ದೊರಕಿಸಿ ಕೊಡಬೇಕು. ಪೆನ್ಡ್ರೈವ್ ಗಳು ಸಾರ್ವಜನಿಕರಿಗೆ ಸಿಗದಂತೆ ನೋಡಿಕೊಳ್ಳಬೇಕು. ಪ್ರಜ್ವಲ್ ರೇವಣ್ಣ ಗೆದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಫಲಿತಾಂಶಕ್ಕೆ ತಡೆ ನೀಡಬೇಕು ಎಂದು ಆಗ್ರಹಿಸಿದರು.
ಪೆನ್ಡ್ರೈವ್ ಪ್ರಕರಣದಿಂದ ಬಿಜೆಪಿಗೂ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಎನ್ಡಿಎ ಕೂಟದಿಂದ ಜೆಡಿಎಸ್ ಪಕ್ಷವನ್ನು ಹೊರ ಹಾಕಬೇಕು ಎಂದು ಶಿವರಾಮೇಗೌಡ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಒತ್ತಾಯಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಎಚ್.ಡಿ.ರೇವಣ್ಣ ಇಬ್ಬರನ್ನು ಬಂಧಿ ಸಬೇಕು. ಸಂತ್ರಸ್ತೆಯರ ನೆರವಿಗೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ದೇವೇಗೌಡರು ಬರ್ಬೇಕು ಎಂದರು.
ಬಿಜೆಪಿ ನಾಯಕರ ಬಾಯಿ ಕಟ್ಟಿದಂತಾಗಿದೆ:
ಎನ್ಡಿಎ ಕೂಟಕ್ಕೆ ಜೆಡಿಎಸ್ ಸೇರಿಸಿಕೊಂಡಿದ್ದರಿಂದ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಧ್ವನಿ ಎತ್ತಲು ಬಾಯಿ ಕಟ್ಟಿ ಹಾಕಿದಂತಾಗಿದೆ. ಆದ್ದರಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದ್ದರಿಂದ ಎನ್ಡಿಎ ಕೂಟದಿಂದ ಜೆಡಿಎಸ್ ಅನ್ನು ಕೈಬಿಡಬೇಕು. ಇಲ್ಲದಿದ್ದರೆ ಜೆಡಿಎಸ್ನಿಂದಲೇ ಬಿಜೆಪಿ ಮೇಲೂ ಪರಿಣಾಮ ಬೀರಲಿದೆ ಎಂದರು.
![]()
ಹಿಂದೆ ನಾಗಮಂಗಲ ಕೆಂಚನಹಳ್ಳಿ ಗಂಗಾಧರಮೂರ್ತಿ ಅವರ ಕೊಲೆ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲದಿದ್ದರೂ ಇದೇ ದೇವೇಗೌಡರು ನನ್ನನ್ನು ಜೈಲಿಗೆ ಕಳುಹಿಸಲು 8 ಕಿ.ಮೀ. ದೂರ ಗಂಗಾಧರ ಮೂರ್ತಿ ಅವರ ಫೋಟೋ ಹೊತ್ತುಕೊಂಡು ಪಾದಯಾತ್ರೆ ಮಾಡಿದ್ದರು. ಆಗ ನಾನು ಎಷ್ಟು ನೋವು ಅನುಭವಿಸಿದ್ದೆನು. ಪ್ರಕರಣದಲ್ಲಿ ನನ್ನದು ಯಾವ ಪಾತ್ರ ಇರಲಿಲ್ಲ. ಅದಕ್ಕೆ ನ್ಯಾಯಾಲಯದ ತೀರ್ಪು ಎಲ್ಲರಿಗೂ ಗೊತ್ತಿದೆ. ಅದರಂತೆ ಇಂದು ಸಹ ಸಂತ್ರಸ್ತೆಯರ ಪರವಾಗಿ ಪಾದಯಾತ್ರೆ ಮಾಡಲಿ ಎಂದು ಆಗ್ರಹಿಸಿದರು.
Former MP of JDS, LR Shivarame Gowda, the supreme leader of HD Deve Gowda Family (LR Shivarame Gowda) has dropped a new bomb. He said that this is not the first time that Revanna has been caught in England. Hassan (Hassan), who spoke at a press conference about the pen drive case, has insisted on the expulsion of the JDS party from the NDA.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm