ಬ್ರೇಕಿಂಗ್ ನ್ಯೂಸ್
04-05-24 07:10 pm HK News Desk ಕರ್ನಾಟಕ
ಮಂಡ್ಯ, ಮೇ.04: ಎಚ್.ಡಿ.ರೇವಣ್ಣನ ವರ್ತನೆ ಸರಿಯಿಲ್ಲ. ಹಿಂದೆ ಲಂಡನ್ ಗೆ ಹೋಗಿದ್ದಾಗ ಅಲ್ಲಿಯೂ ಇದೇ ರೀತಿ ಮಾಡಿ ತಗಲಾಕಿಕೊಂಡಿದ್ದರು ಎಂದು ಬಿಜೆಪಿ ಮುಖಂಡ, ಮಾಜಿ ಸಂಸದ ಎಲ್. ಆರ್.ಶಿವರಾಮೇಗೌಡ ಹೇಳಿದರು.
ರೇವಣ್ಣ ಒಳ್ಳೆಯ ನಡವಳಿಕೆಯ ವ್ಯಕ್ತಿಯಲ್ಲ. ಪ್ರಜ್ವಲ್ ರೇವಣ್ಣ ಇಷ್ಟೊಂದು ದೌರ್ಜನ್ಯ ನಡೆಸುತ್ತಿದ್ದರೂ ಅವರ ಅಪ್ಪ, ಅಮ್ಮ ನೋಡಿಕೊಂಡು ಕತ್ತೆ ಕಾಯ್ತಿದ್ರಾ? ಇಂತಹ ವಿಕೃತ ಮನಸ್ಥಿತಿಯವರನ್ನು ನಾನು ಎಲ್ಲಿಯೂ ನೋಡೇ ಇಲ್ಲ. ಪ್ರಜ್ವಲ್ ಮುಂದೆ ಉಮೇಶ್ ರೆಡ್ಡಿಯೂ ಏನು ಇಲ್ಲ ಎಂದು ಹೇಳಿದರು. ಕೂಡಲೇ ಸರ್ಕಾರ ಸೂಕ್ತ ತನಿಖೆ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಸಂತ್ರಸ್ತೆಯರಿಗೆ ನ್ಯಾಯ ದೊರಕಿಸಿ ಕೊಡಬೇಕು. ಪೆನ್ಡ್ರೈವ್ ಗಳು ಸಾರ್ವಜನಿಕರಿಗೆ ಸಿಗದಂತೆ ನೋಡಿಕೊಳ್ಳಬೇಕು. ಪ್ರಜ್ವಲ್ ರೇವಣ್ಣ ಗೆದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಫಲಿತಾಂಶಕ್ಕೆ ತಡೆ ನೀಡಬೇಕು ಎಂದು ಆಗ್ರಹಿಸಿದರು.
ಪೆನ್ಡ್ರೈವ್ ಪ್ರಕರಣದಿಂದ ಬಿಜೆಪಿಗೂ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಎನ್ಡಿಎ ಕೂಟದಿಂದ ಜೆಡಿಎಸ್ ಪಕ್ಷವನ್ನು ಹೊರ ಹಾಕಬೇಕು ಎಂದು ಶಿವರಾಮೇಗೌಡ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಒತ್ತಾಯಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ಎಚ್.ಡಿ.ರೇವಣ್ಣ ಇಬ್ಬರನ್ನು ಬಂಧಿ ಸಬೇಕು. ಸಂತ್ರಸ್ತೆಯರ ನೆರವಿಗೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ದೇವೇಗೌಡರು ಬರ್ಬೇಕು ಎಂದರು.
ಬಿಜೆಪಿ ನಾಯಕರ ಬಾಯಿ ಕಟ್ಟಿದಂತಾಗಿದೆ:
ಎನ್ಡಿಎ ಕೂಟಕ್ಕೆ ಜೆಡಿಎಸ್ ಸೇರಿಸಿಕೊಂಡಿದ್ದರಿಂದ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಧ್ವನಿ ಎತ್ತಲು ಬಾಯಿ ಕಟ್ಟಿ ಹಾಕಿದಂತಾಗಿದೆ. ಆದ್ದರಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದ್ದರಿಂದ ಎನ್ಡಿಎ ಕೂಟದಿಂದ ಜೆಡಿಎಸ್ ಅನ್ನು ಕೈಬಿಡಬೇಕು. ಇಲ್ಲದಿದ್ದರೆ ಜೆಡಿಎಸ್ನಿಂದಲೇ ಬಿಜೆಪಿ ಮೇಲೂ ಪರಿಣಾಮ ಬೀರಲಿದೆ ಎಂದರು.
![]()
ಹಿಂದೆ ನಾಗಮಂಗಲ ಕೆಂಚನಹಳ್ಳಿ ಗಂಗಾಧರಮೂರ್ತಿ ಅವರ ಕೊಲೆ ಪ್ರಕರಣದಲ್ಲಿ ನನ್ನದೇನೂ ತಪ್ಪಿಲ್ಲದಿದ್ದರೂ ಇದೇ ದೇವೇಗೌಡರು ನನ್ನನ್ನು ಜೈಲಿಗೆ ಕಳುಹಿಸಲು 8 ಕಿ.ಮೀ. ದೂರ ಗಂಗಾಧರ ಮೂರ್ತಿ ಅವರ ಫೋಟೋ ಹೊತ್ತುಕೊಂಡು ಪಾದಯಾತ್ರೆ ಮಾಡಿದ್ದರು. ಆಗ ನಾನು ಎಷ್ಟು ನೋವು ಅನುಭವಿಸಿದ್ದೆನು. ಪ್ರಕರಣದಲ್ಲಿ ನನ್ನದು ಯಾವ ಪಾತ್ರ ಇರಲಿಲ್ಲ. ಅದಕ್ಕೆ ನ್ಯಾಯಾಲಯದ ತೀರ್ಪು ಎಲ್ಲರಿಗೂ ಗೊತ್ತಿದೆ. ಅದರಂತೆ ಇಂದು ಸಹ ಸಂತ್ರಸ್ತೆಯರ ಪರವಾಗಿ ಪಾದಯಾತ್ರೆ ಮಾಡಲಿ ಎಂದು ಆಗ್ರಹಿಸಿದರು.
Former MP of JDS, LR Shivarame Gowda, the supreme leader of HD Deve Gowda Family (LR Shivarame Gowda) has dropped a new bomb. He said that this is not the first time that Revanna has been caught in England. Hassan (Hassan), who spoke at a press conference about the pen drive case, has insisted on the expulsion of the JDS party from the NDA.
05-01-26 03:14 pm
Bangalore Correspondent
ಬಳ್ಳಾರಿ ಪ್ರಕರಣ ; ಸುಮೊಟೋ ಕೇಸು ದಾಖಲಿಸಿ ಪೊಲೀಸರ ತ...
05-01-26 01:24 pm
ಎಸ್ ಪಿ ಪವನ್ ಆತ್ಮಹತ್ಯೆ ವದಂತಿ ; ಸರ್ಕಾರ ಅವರ ಡೆತ...
04-01-26 10:27 pm
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
05-01-26 02:13 pm
HK News Desk
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm