ಬ್ರೇಕಿಂಗ್ ನ್ಯೂಸ್
03-12-20 12:49 pm Headline Karnataka News Network ಕರ್ನಾಟಕ
ವಿಜಯಪುರ, ಡಿ.3: ಅಗರ್ ಶಿವಾಜಿ ನಾ ಹೋತಾತೋ ಸಬ್ ಕಾ ಸನ್ನತ್ ಹೋತಾತಾ... ಬಸನಗೌಡ ಮರಾಠರಿಗೆ ಹುಟ್ಟಿದಾನಾ ಎಂದು ಕೇಳ್ತಾರೆ ಕೆಲವರು.. ಹೌದು.. ನಾನು ಬಸನಗೌಡ ಮರಾಠರಿಗೆ ಹುಟ್ಟಿದೇನೆ, ನೀವೆಲ್ಲ ಕಾಶ್ಮೀರಿಯರಿಗೆ ಹುಟ್ಟಿದೀರಾ?
ಹೀಗೆಂದು ನಾಲಗೆ ಹರಿಬಿಟ್ಟಿದ್ದಾರೆ ಬಿಜೆಪಿ ಮುಖಂಡ, ಶಾಸಕ ಬಸನಗೌಡ ಯತ್ನಾಳ್. ಡಿಸೆಂಬರ್ 5ರಂದು ಕನ್ನಡ ಸಂಘಟನೆಗಳು ನೀಡಿರುವ ಬಂದ್ ಕರೆಯನ್ನು ವಿರೋಧಿಸಿ ಶಾಸಕ ಯತ್ನಾಳ ನೇತೃತ್ವದಲ್ಲಿ ವಿಜಯಪುರದಲ್ಲಿ ಹಿಂದೂಪರ ಸಂಘಟನೆಗಳು, ಬೆಂಬಲಿಗರೊಂದಿಗೆ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಭಾಷಣ ಮಾಡಿದ ಯತ್ನಾಳ್, ನಾವು ಅಡ್ಜಸ್ಟಮೆಂಟ್ ರಾಜಕಾರಣವನ್ನು ಬಿಡಬೇಕು. ಫೇಸಬುಕ್ ನಲ್ಲಿ ಕೆಲವರು ಬೈದಿದ್ದಾರೆ, ಅವನ್ನು ನೋಡಿದ್ರೆ ಇವರು ಕನ್ನಡಿಗರಾ ಅನ್ನೊ ಪ್ರಶ್ನೆ ಮೂಡತ್ತೆ. ಬೈಗುಳ ಹುಟ್ಟಿದ್ದೆ ವಿಜಯಪುರದಲ್ಲಿ.. ನಮಗೂ ಬರುತ್ತೆ, ಆದ್ರೆ ನಾವು ಸುಮ್ಮನಿದ್ದೇವೆ. ನಾನು ಕೊಡೊ ಸ್ಟೇಟಮೆಂಟ್ 24 ತಾಸು ಕನ್ಫೂಷನ್ ಇರುತ್ತೆ, ನಂತ್ರದಲ್ಲಿ ಅದೇ ಸರಿಯಾಗಿರತ್ತೆ..

ಈ ದೇಶದಲ್ಲಿ ಗೋವುಗಳ ಹತ್ಯೆ ನಿಷೇಧಿಸಿ, ಗೋವನ್ನು ಮತ್ತು ದಾಳಿಕೋರರ ಮುಂದೆ ಸಾಮಾನ್ಯ ಜನರನ್ನು ರಕ್ಷಣೆ ಮಾಡಿದವರು ಶಿವಾಜಿ ಮಹಾರಾಜ್. ಅಗರ್ ಶಿವಾಜಿ ನಾ ಹೋತಾತೋ ಸಬ್ ಕಾ ಸನ್ನತ್ ಹೋತಾತಾ ಅನ್ನೋ ಮಾತು ಮರಾಠರಲ್ಲಿ ಪ್ರಚಲಿತ. ಇದಕ್ಕೆ ಬಸನಗೌಡ ಮರಾಠರಿಗೆ ಹುಟ್ಟಿದಾನಾ ಎಂದು ಕೇಳ್ತಾರೆ ಕೆಲವರು. ಆದರೆ, ನಾನು ಕೇಳ್ತೀನಿ, ಹೌದು.. ನಾನು ಬಸನಗೌಡ ಮರಾಠರಿಗೆ ಹುಟ್ಟಿದೇನೆ, ನೀವೆಲ್ಲ ಕಾಶ್ಮೀರಿಯರಿಗೆ ಹುಟ್ಟಿದೀರಾ.. ಅಲ್ಲಾ ಇನ್ನೊಬ್ರಿಗೆ ಹುಟ್ಟಿದೀರಾ ಎಂದು ಪ್ರಶ್ನೆ ಮಾಡಿದ್ರು.
ಪ್ರತಿಯೊಂದರಲ್ಲೂ ಜಾತಿ, ಭೇದ ಹುಟ್ಟಿಸ್ತಾರೆ. ವೀರಶೈವ- ಲಿಂಗಾಯತ ಎಂದು ಭೇದ ಶುರುವಾಗಿದೆ. ಏನ್ ವೀರಶೈವರು ಮತ್ತು ಲಿಂಗಾಯತರು ಬೇರೆ ಬೇರೆ ರೀತಿ ವಿಭೂತಿ ಹಚ್ಚುತ್ತಾರಾ? ಕೆಲ ಕಳ್ಳ ನನ್ನ ಮಕ್ಕಳಿಂದ ಹಿಂದೂ ಸಮಾಜವನ್ನು ಒಡೆಯುವ ವ್ಯವಸ್ಥಿತ ಷಡ್ಯಂತ್ರ ನಡೀತಿದೆ.. ಇಷ್ಟೆಲ್ಲ ಇದ್ದರೂ ಈ ವಾಟಾಳ್ಯಾ(ವಾಟಾಳ) ಬಾಯಿಗೆ ಬಂದಂತೆ ಮಾತಾಡ್ತಾನೆ. ನಮ್ಮಲ್ಲೂ ಕೆಲ ರಾಜಕಾರಣಿಗಳು ತುಡುಗರು ಇದ್ದಾರೆ. ಇವರದ್ದೆಲ್ಲ ಅಡ್ಜೆಸ್ಟಮೆಂಟ್ ರಾಜಕಾರಣ ಮಾಡಾತ್ರೀ.. ಇವರೂ ಕಳ್ಳರೆ, ಅವರೂ(ವಾಟಾಳ, ಕನ್ನಡಪರ ಸಂಘಟನೆಗಳು) ಕಳ್ಳರೇ.. ನೀ ಏನೆ ಮಾಡೋದಿದ್ರು ಅಲ್ಲೆ ಬೆಂಗಳೂರಲ್ಲೇ ಮಾಡು.. ಇಲ್ಲೇನು ಕಿಸಿತಿಯೋ ನೋಡ್ತೀವಿ ಎಂದು ವಾಟಾಳ್ ವಿರುದ್ಧ ಯತ್ನಾಳ್ ಸವಾಲು ಹಾಕಿದ್ರು.

ನನ್ನ ಪ್ರತಿಕೃತಿ ಸುಡ್ತೀರಾ? ನೀವು ಸುಟ್ಟಷ್ಟು ನನ್ನ ಆಯುಷ್ಯ ಹೆಚ್ಚಾಗುತ್ತೆ. ನನಗೆ ಬುದ್ದಿ ಬ್ರಮಣೆಯಾಗಿದೆ ಅಂತೀಯಾ? ಬಹಳ ಜನರಿಗೆ ಬುದ್ದಿ ಬ್ರಮಣೆ ಮಾಡುವ ಶಕ್ತಿ ದೇವರು ನನಗೆ ಕೊಟ್ಟಿದ್ದಾನೆ. ನಾನು ಐದು ಬಾರಿ ಚುನಾಯಿತನಾಗಿದ್ದೇನೆ, ವಾಟಾಳ ಹತ್ತು ಓಟು ಪಡೆದು ಮಾತಾಡ್ತಾನೆ. ಎಲ್ಲ ಶಾಸಕರ ಗೌರವ ಕಾಪಾಡುವ ಅಧ್ಯಕ್ಷ ನಾನೇ ಇದ್ದೀನಿ. ಹಕ್ಕು ಬಾಧ್ಯತಾ ಸಮೀತಿ ಅಧ್ಯಕ್ಷ ನಾನೇ ಇರುವುದರಿಂದ ವಿಚಾರ ಮಾಡಿ ಮಾತನಾಡಿ. ವಾಟಾಳ ಬಗ್ಗೆ ನಾನು ಸದನದಲ್ಲಿ ಮಂಡಿಸಿ, ದೂರು ನೀಡಿದ್ರೆ ವಾಟಾಳಗೆ ಒಂದು ವರ್ಷ ಜೈಲು, ಒಂದು ಲಕ್ಷ ರೂಪಾಯಿ ದಂಡ ಆಗುತ್ತೆ. ಇನ್ಮೇಲೆ ಬಾಯಿಗೆ ಬಂದಂಗೆ ಮಾತಾಡಿದ್ರೆ, ಕಪ್ಪು ಮಸಿ ಬಳೀತಿನಿ ಅಂದ್ರೆ ಇನ್ನಿದೆ ನಿಮಗೆ...
ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೇ ಛೀಮಾರಿ ಹಾಕುವ ಅವಕಾಶ ಪಾರ್ಲಿಮೆಂಟ್ ಗೆ ಇದೆ. ನಿನಗೂ ವಿಧಾನಸೌಧಕ್ಕೆ ಕರೆದು ಛೀಮಾರಿ ಹಾಕಿಸ್ತಿನಿ. ಏ ತೋ ಝಲಕ್ ಹೈ, ಪಿಚ್ಚರ್ ಅಭಿ ಬಾಕಿ ಹೈ, ಇನ್ನು ಪಿಚ್ಚರ್ ತೋರಿಸ್ತೀನಿ... ಇನ್ನಾರು ತಿಂಗಳಲ್ಲಿ ವಿಜಯಪುರ ನೋಡಲು ಕರ್ನಾಟಕದ ಜನ್ರು ಬರಬೇಕು. ಹಾಗೆ ಇದನ್ನು ಮಾಡೆಲ್ ಆಗಿ ಮಾಡ್ತೆನೆ. ಕನ್ನಡವನ್ನು ನನಗೆ ಕಲಿಸಲು ಬರಬೇಡಿ. ಕನ್ನಡದ ಹೆಸರಲ್ಲಿ ದಂಧೆ ಮಾಡಬೇಡಿ. ಇಡಿ ಕರ್ನಾಟಕ ಜನ್ರು ಬಂದ್ ಅನ್ನು ಸಂಪೂರ್ಣ ವಿಫಲ ಮಾಡಿ. ಈ ಮೂಲಕ ನಕಲಿ ಕನ್ನಡ ಹೋರಾಟಗಾರರನ್ನು ಹತ್ತಿಕ್ಕಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕರೆ ಕೊಟ್ಟಿದ್ದಾರೆ.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am