ಬ್ರೇಕಿಂಗ್ ನ್ಯೂಸ್
05-05-24 09:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.5: ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಇದು ರಾಜಕೀಯ ಷಡ್ಯಂತ್ರ ಎಂದು ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದಾಗ್ಯೂ ರಾಜಕೀಯ ಷಡ್ಯಂತ್ರದಿಂದ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಏಪ್ರಿಲ್ 28ಕ್ಕೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ರು, ಆದರೆ ನನ್ನ ವಿರುದ್ಧ ಯಾವುದೇ ಪುರಾವೆ ಸಿಗಲಿಲ್ಲ. ಹಾಗಾಗಿ ಮೇ 2 ರಂದು ಮತ್ತೊಂದು ಕೇಸ್ ಹಾಕಿಸಿ ಬಂಧಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ರಾಜಕೀಯ ಇತಿಹಾಸದಲ್ಲೇ ಇದು ದೊಡ್ಡ ಷಡ್ಯಂತ್ರವಾಗಿದೆ. ಇದನ್ನು ಎದುರಿಸುವ ಶಕ್ತಿಯಿದೆ. ಎಲ್ಲವನ್ನೂ ಜಡ್ಜ್ ಮುಂದೆ ಹೇಳುವುದಾಗಿ ತಿಳಿಸಿದರು.
ಆಸ್ಪತ್ರೆಯಲ್ಲಿ ರೇವಣ್ಣ ಅವರಿಗೆ ರಕ್ತದೊತ್ತಡ, ಸಕ್ಕರೆ ಪ್ರಮಾಣ, ಇಸಿಜಿ ಮತ್ತಿತರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ ಆಸ್ಪತ್ರೆಯಿಂದ ಕೋರಮಂಗಲದಲ್ಲಿರುವ ಜಡ್ಜ್ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದರು.
Holenarasipura MLA H D Revanna on Sunday called his arrest over the allegations of abducting a woman, whom Revanna's son is alleged to have sexually abused, an outcome of a political conspiracy.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm