ಬ್ರೇಕಿಂಗ್ ನ್ಯೂಸ್
05-05-24 10:54 pm HK News Desk ಕರ್ನಾಟಕ
ಬೆಂಗಳೂರು, ಮೇ 05: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿ, ಅಕ್ರಮ ಬಂಧನದಲ್ಲಿ ಇರಿಸಿದ ಆರೋಪದ ಮೇಲೆ ಶಾಸಕ ರೇವಣ್ಣ ಅವರನ್ನ ಬಂಧಿಸಿರುವುದು ಸರಿಯಾದ ಕ್ರಮ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.
ಅಲ್ಲದೇ, ಪ್ರಜ್ವಲ್ ರೇವಣ್ಣ ಈಗಲೂ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್ಡಿಎ ಸಂಸದರಾದರೆ ಅವರ ವಿರುದ್ಧ ಪಕ್ಷದ ವತಿಯಿಂದಲೇ ಕಾನೂನು ಕ್ರಮ ಜರುಗಿಸುವ ಸಾಧ್ಯತೆಗಳ ಬಗ್ಗೆ ವರಿಷ್ಠರ ಜತೆ ಚರ್ಚಿಸುವುದಾಗಿ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಜ್ವಲ್ ರೇವಣ್ಣ ನಡೆಸಿದ ಮಹಿಳಾ ದೌರ್ಜನ್ಯದ ಘಟನೆಗಳು ಯಾವಾಗ ನಡೆದಿವೆ ಎಂಬ ಬಗ್ಗೆ ತನಿಖಾ ತಂಡ ವರದಿ ನೀಡಬೇಕಿದೆ. ನಮ್ಮ ಹೊಂದಾಣಿಕೆಯಲ್ಲಿ ಇನ್ನೂ ಪ್ರಜ್ವಲ್ ರೇವಣ್ಣ ಗೆದ್ದಿಲ್ಲ. ಈಗ ಕಾಂಗ್ರೆಸ್– ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಜೆಡಿಎಸ್ ಪಕ್ಷ ಈಗಾಗಲೇ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಜೆಡಿಎಸ್ ಜತೆಗೆ ಇದೇ ಮೊದಲ ಬಾರಿ ಚುನಾವಣಾ ಮೈತ್ರಿ ಏರ್ಪಟ್ಟಿದೆ. ಜೆಡಿಎಸ್ ತನ್ನ ಕೋಟಾದಲ್ಲಿ ಪ್ರಜ್ವಲ್ಗೆ ಟಿಕೆಟ್ ಕೊಟ್ಟಿದೆ. ಅವರ ಮೇಲೆ ಆರೋಪ ಕೇಳಿ ಬಂದ ಬಳಿಕ ಅವರನ್ನು ಜೆಡಿಎಸ್ ಅಮಾನತು ಮಾಡಿದೆ ಎಂದರು.
ಈಗ ಪ್ರಜ್ವಲ್ ಅವರನ್ನು ಅತ್ಯಾಚಾರಿ ಎಂದು ಕರೆಯುವ ಸಿದ್ದರಾಮಯ್ಯ 2019 ರ ಏಪ್ರಿಲ್ನಲ್ಲಿ ಕಡೂರಿನ ಎಪಿಎಂಸಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಹಾಡಿ ಹೊಗಳಿದ್ದರು. ‘ಪ್ರಜ್ವಲ್ ಯುವ ನಾಯಕ, ಓಡಾಡಿ ಕೆಲಸ ಮಾಡ್ತಾರೆ. ಆದ್ದರಿಂದ ಅವರಿಗೇ ಮತ ನೀಡಿ ಗೆಲ್ಲಿಸಿಕೊಡಿ ಎಂದು ಟ್ವೀಟ್ ಮಾಡಿದ್ದರು. ಈ ಮೂಲಕ ಪ್ರಜ್ವಲ್ ಪರ ಕೆಲಸ ಮಾಡಿ ಸಿದ್ದರಾಮಯ್ಯ ಮತವನ್ನು ಯಾಚಿಸಿದ್ದರು ಎಂದು ಅಶೋಕ ಹೇಳಿದರು.
ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣ ಅವರ ಪ್ರಕರಣವನ್ನು ಬಿಜೆಪಿ ಒಪ್ಪಿಕೊಳ್ಳುವುದಿಲ್ಲ. ಆದರೆ, ಪ್ರಕರಣದ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಅವರು ತಿಳಿಸಿದರು.
ಬಿಜೆಪಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಷಯವಾಗಿ ಎಚ್.ಡಿ.ಕುಮಾರಸ್ವಾಮಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.
BJP R Ashok says Revanna arrest has been a right move by congress government. In case if Prajwal wins this coming lok sabha elections the party also will take right action against him he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm