ಬ್ರೇಕಿಂಗ್ ನ್ಯೂಸ್
06-05-24 03:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.06: ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ-ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಹೌದು.. ಈ ಹಿಂದೆ ದೆಹಲಿ ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯರಿಬ್ಬರು ಪರಸ್ಪರ ಆಲಂಗಿಸಿಕೊಂಡು ಮುತ್ತಿಟ್ಟುಕೊಂಡಿದ್ದರು. ಇದನ್ನು ಸಹಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ಯುವಕರ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನಲ್ಲೇ ಇಂತಹ ಮತ್ತೊಂದು ಕೃತ್ಯ ವರದಿಯಾಗಿದೆ
ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್ನ ಸ್ಯಾಮ್ ಎಂಬುವವರ ಖಾತೆಯಿಂದ ಪೋಸ್ಟ್ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್ ಮಾಡಿದ್ದಾರೆ.
ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ. ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ. ಮತ್ತೆ ಕೆಲವರು 'ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ' ಎಂದಿದ್ದಾರೆ.
Hey @OfficialBMRCL @NammaMetro_ @BlrCityPolice
— KPSB 52 (@Sam459om) May 5, 2024
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I
Passengers of Bengaluru Metro are expressing outrage over recent incidents of unruly behaviour among young commuters, likening the atmosphere to that of Delhi Metro. The discontent stems from a video posted online capturing what appears to be a couple engaging in public displays of affection, prompting calls for action from authorities.
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 10:10 pm
HK News Desk
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm