ಬ್ರೇಕಿಂಗ್ ನ್ಯೂಸ್
10-05-24 10:11 am HK News Desk ಕರ್ನಾಟಕ
ಹಾಸನ, ಮೇ.10: ಮೇ 9, ಗುರುವಾರ ಪ್ರಕಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಗನ ಜೊತೆಗೆ ತಾಯಿಯೂ ಪರೀಕ್ಷೆ ಬರೆದು ಇಬ್ಬರೂ ಪಾಸ್ ಆಗಿ ಖುಷಿ ಅನುಭವಿಸುತ್ತಿದ್ದಾರೆ.
ಹೌದು, ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮದ ನಿವಾಸಿಯಾದ ಭುವನೇಶ್ ಪತ್ನಿ ಟಿ. ಆರ್ ಜ್ಯೋತಿ (38) ಪುನರಾವರ್ತಿತ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿದ್ದರೆ, ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವಿವೇಕ ಕಾನ್ವೆಂಟ್ ವಿದ್ಯಾರ್ಥಿಯಾಗಿ ಮಗ ಸಿ. ಬಿ ನಿತಿನ್ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದನು.
ಫಲಿತಾಂಶ ಪ್ರಕಟವಾಗಿದ್ದು, 250 ಅಂಕ ಪಡೆದು ತಾಯಿ ಜ್ಯೋತಿ ಹಾಗೂ ಅವರ ಪುತ್ರ ಸಿ. ಬಿ ನಿತಿನ್ 582 ಅಂಕ ಪಡೆದು ಪಾಸ್ ಆಗಿದ್ದಾರೆ. ಅಮ್ಮ- ಮಗ ಇಬ್ಬರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೆ ಕುಟುಂಬದಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ.
ಚಿನ್ನಳ್ಳಿ ಬೇಕರಿ ಇಟ್ಟುಕೊಂಡಿರುವ ಭುವನೇಶ್ ಅವರ ಪತ್ನಿ ಮತ್ತು ಮಗ ಪಾಸಾಗಿದ್ದಕ್ಕೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ವಿಭಾಗ ಬಿಡುಗಡೆ ಮಾಡಿದೆ. ಈ ವರ್ಷ ಕಳೆದ ವರ್ಷಕ್ಕಿಂತ ಶೇಕಡ.30 ರಷ್ಟು ಹೆಚ್ಚಿನ ಫಲಿತಾಂಶ ಬಂದಿದ್ದು, ಒಟ್ಟಾರೆಯಾಗಿ ಶೇ. 73.40ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
Hassan, Mother Jyothi and son Bhuvanesh both pass in SSLC Exams 2024. Distribute sweets and express their joy.
03-01-26 03:24 pm
HK News Desk
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm