ಬ್ರೇಕಿಂಗ್ ನ್ಯೂಸ್
10-05-24 06:07 pm HK News Desk ಕರ್ನಾಟಕ
ಮೈಸೂರು, ಮೇ.10: ರಾಜ್ಯದ ಎಲ್ಲಾ ಕ್ರಿಮಿನಲ್ ಕೇಸುಗಳನ್ನು ನಮ್ಮ ಪೊಲೀಸರು ತನಿಖೆ ನಡೆಸುತ್ತಾರೆ. ಎಸ್ ಐಟಿ ಎಂದರೆ ನಮ್ಮ ಪೊಲೀಸರೇ ತನಿಖೆ ನಡೆಸುವುದು, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ, ಕಾನೂನು ಪ್ರಕಾರ ಎಸ್ ಐಟಿ ರಚನೆ ಮಾಡಿದ್ದೇವೆ, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ ಅವರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ತನಿಖೆ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಮಾಡಿ ವರದಿ ನೀಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಸಿಬಿಐಗೆ ನೀಡಿದ್ದ ಡಿ ಕೆ ರವಿ ಕೇಸು ಏನಾಯಿತು, ಇಂದು ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯ ಮಾಡುವವರು ಹಿಂದೆ ಟೀಕೆ ಮಾಡಿದ್ದರು. ಬಿಜೆಪಿ ಆಡಳಿತದಲ್ಲಿ ಸಿಬಿಐಗೆ ಒಂದೇ ಒಂದು ಕೇಸು ಕೊಡಲಿಲ್ಲ. ಬಿಜೆಪಿಯವರು ಸಿಬಿಐಗೆ ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಎನ್ನುತ್ತಿದ್ದರು.
![]()

ಚೋರ್ ಬಚಾವ್ ಸಂಸ್ಥೆ ಎಂದು ದೇವೇಗೌಡರು ಹೇಳಿದ್ದರು. ಈಗ ನೋಡಿದರೆ ಸಿಬಿಐಗೆ ಕೊಡಿ ಎನ್ನುತ್ತಿದ್ದಾರೆ. ಇದರ ಅರ್ಥ ಏನು, ಸರಿಯಾದ ದಾರಿಯಲ್ಲಿ ತನಿಖೆ ನಡೆಯುತ್ತಿದೆ ಎಂಬ ನಂಬಿಕೆ ನನಗಿದೆ. ನಾನು ಯಾವತ್ತೂ ಪೊಲೀಸರಿಗೆ ಕಾನೂನಿಗೆ ವಿರುದ್ಧವಾಗಿ ತನಿಖೆ ಮಾಡಿ ಎಂದು ಹೇಳುವುದಿಲ್ಲ. ಎಸ್ ಐಟಿ ಮೇಲೆ ನಂಬಿಕೆ ಇದೆ, ನಮ್ಮ ಪೊಲೀಸ್ ಮೇಲೆ ಅವರಿಗೆ ನಂಬಿಕೆ ಇಲ್ವಾ ಎಂದು ಪ್ರಶ್ನಿಸಿದರು.
ಈ ಹಿಂದೆ ಸಿಬಿಐಗೆ ನಾವೇ ಲಾಟರಿ ಕೇಸು, ಕೆಜೆ ಜಾರ್ಜ್ ಕೇಸು, ಡಿಕೆ ರವಿ ಕೇಸು ಕೊಟ್ಟಿದ್ದೆವು. ಆ ಪ್ರಕರಣದಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ, ಹಾಗಂತ ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದರ್ಥವಲ್ಲ, ಈ ಪ್ರಕರಣದಲ್ಲಿ ನಮ್ಮ ಪೊಲೀಸರೇ ತನಿಖೆ ಮಾಡುತ್ತಾರೆ ಎಂದರು.

ಯಾರ ಹಸ್ತಕ್ಷೇಪವೂ ಇಲ್ಲ ;
ಪ್ರಜ್ವಲ್ ರೇವಣ್ಣ ಕೇಸಿನಲ್ಲಿ ಯಾರ ಹಸ್ತಕ್ಷೇಪ, ಒತ್ತಡವಿಲ್ಲ, ನಾನಾಗಲಿ, ಡಿ ಕೆ ಶಿವಕುಮಾರ್ ಆಗಲಿ ಮಧ್ಯೆಪ್ರವೇಶಿಸುತ್ತಿಲ್ಲ, ಪ್ರಭಾವ ಬೀರುತ್ತಿಲ್ಲ, ತನಿಖೆಯ ಹಾದಿ ತಪ್ಪಿಸುತ್ತಲೂ ಇಲ್ಲ, ಸತ್ಯಾಸತ್ಯತೆ ಹೊರಬರುತ್ತದೆ. ಪ್ರಕರಣಕ್ಕೆ ಅಂತಾರಾಷ್ಟ್ರೀಯ ಸಂಪರ್ಕ ಇದೆ ಎಂಬುದೆಲ್ಲಾ ನಿಜವಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎನ್ನುವ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರಷ್ಟೆ ಎಂದರು.
Karnataka Chief Minister Siddaramaiah on Friday ruled out the possibility of handing over the investigations into the sex assault cases against Janata Dal (Secular) MP Prajwal Revanna to the Central Bureau of Investigation (CBI).
03-01-26 03:24 pm
HK News Desk
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm