ಬ್ರೇಕಿಂಗ್ ನ್ಯೂಸ್
10-05-24 06:07 pm HK News Desk ಕರ್ನಾಟಕ
ಮೈಸೂರು, ಮೇ.10: ರಾಜ್ಯದ ಎಲ್ಲಾ ಕ್ರಿಮಿನಲ್ ಕೇಸುಗಳನ್ನು ನಮ್ಮ ಪೊಲೀಸರು ತನಿಖೆ ನಡೆಸುತ್ತಾರೆ. ಎಸ್ ಐಟಿ ಎಂದರೆ ನಮ್ಮ ಪೊಲೀಸರೇ ತನಿಖೆ ನಡೆಸುವುದು, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ, ಕಾನೂನು ಪ್ರಕಾರ ಎಸ್ ಐಟಿ ರಚನೆ ಮಾಡಿದ್ದೇವೆ, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ ಅವರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ತನಿಖೆ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಮಾಡಿ ವರದಿ ನೀಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಸಿಬಿಐಗೆ ನೀಡಿದ್ದ ಡಿ ಕೆ ರವಿ ಕೇಸು ಏನಾಯಿತು, ಇಂದು ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯ ಮಾಡುವವರು ಹಿಂದೆ ಟೀಕೆ ಮಾಡಿದ್ದರು. ಬಿಜೆಪಿ ಆಡಳಿತದಲ್ಲಿ ಸಿಬಿಐಗೆ ಒಂದೇ ಒಂದು ಕೇಸು ಕೊಡಲಿಲ್ಲ. ಬಿಜೆಪಿಯವರು ಸಿಬಿಐಗೆ ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಎನ್ನುತ್ತಿದ್ದರು.
![]()

ಚೋರ್ ಬಚಾವ್ ಸಂಸ್ಥೆ ಎಂದು ದೇವೇಗೌಡರು ಹೇಳಿದ್ದರು. ಈಗ ನೋಡಿದರೆ ಸಿಬಿಐಗೆ ಕೊಡಿ ಎನ್ನುತ್ತಿದ್ದಾರೆ. ಇದರ ಅರ್ಥ ಏನು, ಸರಿಯಾದ ದಾರಿಯಲ್ಲಿ ತನಿಖೆ ನಡೆಯುತ್ತಿದೆ ಎಂಬ ನಂಬಿಕೆ ನನಗಿದೆ. ನಾನು ಯಾವತ್ತೂ ಪೊಲೀಸರಿಗೆ ಕಾನೂನಿಗೆ ವಿರುದ್ಧವಾಗಿ ತನಿಖೆ ಮಾಡಿ ಎಂದು ಹೇಳುವುದಿಲ್ಲ. ಎಸ್ ಐಟಿ ಮೇಲೆ ನಂಬಿಕೆ ಇದೆ, ನಮ್ಮ ಪೊಲೀಸ್ ಮೇಲೆ ಅವರಿಗೆ ನಂಬಿಕೆ ಇಲ್ವಾ ಎಂದು ಪ್ರಶ್ನಿಸಿದರು.
ಈ ಹಿಂದೆ ಸಿಬಿಐಗೆ ನಾವೇ ಲಾಟರಿ ಕೇಸು, ಕೆಜೆ ಜಾರ್ಜ್ ಕೇಸು, ಡಿಕೆ ರವಿ ಕೇಸು ಕೊಟ್ಟಿದ್ದೆವು. ಆ ಪ್ರಕರಣದಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ, ಹಾಗಂತ ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದರ್ಥವಲ್ಲ, ಈ ಪ್ರಕರಣದಲ್ಲಿ ನಮ್ಮ ಪೊಲೀಸರೇ ತನಿಖೆ ಮಾಡುತ್ತಾರೆ ಎಂದರು.

ಯಾರ ಹಸ್ತಕ್ಷೇಪವೂ ಇಲ್ಲ ;
ಪ್ರಜ್ವಲ್ ರೇವಣ್ಣ ಕೇಸಿನಲ್ಲಿ ಯಾರ ಹಸ್ತಕ್ಷೇಪ, ಒತ್ತಡವಿಲ್ಲ, ನಾನಾಗಲಿ, ಡಿ ಕೆ ಶಿವಕುಮಾರ್ ಆಗಲಿ ಮಧ್ಯೆಪ್ರವೇಶಿಸುತ್ತಿಲ್ಲ, ಪ್ರಭಾವ ಬೀರುತ್ತಿಲ್ಲ, ತನಿಖೆಯ ಹಾದಿ ತಪ್ಪಿಸುತ್ತಲೂ ಇಲ್ಲ, ಸತ್ಯಾಸತ್ಯತೆ ಹೊರಬರುತ್ತದೆ. ಪ್ರಕರಣಕ್ಕೆ ಅಂತಾರಾಷ್ಟ್ರೀಯ ಸಂಪರ್ಕ ಇದೆ ಎಂಬುದೆಲ್ಲಾ ನಿಜವಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎನ್ನುವ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರಷ್ಟೆ ಎಂದರು.
Karnataka Chief Minister Siddaramaiah on Friday ruled out the possibility of handing over the investigations into the sex assault cases against Janata Dal (Secular) MP Prajwal Revanna to the Central Bureau of Investigation (CBI).
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm