ಬ್ರೇಕಿಂಗ್ ನ್ಯೂಸ್
11-05-24 05:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.11: ವಿಧಾನ ಪರಿಷತ್ತಿಗೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯೇ ಮುಂದುವರಿಯುವುದು ಖಚಿತವಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರೇ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರು ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಹಾಗೂ ಜೆಡಿಎಸ್ಸಿಗೆ ಎರಡು ಸ್ಥಾನ ಹಂಚಿಕೆಯಾಗಲಿದೆ.
ಲೋಕಸಭೆ ಚುನಾವಣೆ ಪೂರ್ವದಲ್ಲಿ ಜೆಡಿಎಸ್, ಎನ್ ಡಿಎ ಮೈತ್ರಿಕೂಟ ಸೇರಿದ ಬೆನ್ನಲ್ಲೇ ಪರಿಷತ್ತಿನ ಏಳು ಸ್ಥಾನಗಳ ಚುನಾವಣೆಯಲ್ಲಿ 4-3 ಸ್ಥಾನಗಳ ಹಂಚಿಕೆ ಬಗ್ಗೆ ನಿರ್ಧಾರವಾಗಿತ್ತು. ರಾಷ್ಟ್ರೀಯ ನಾಯಕರ ಮಟ್ಟದಲ್ಲಿ ಆಗಿರುವ ನಿರ್ಧಾರದಂತೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ಸಿನ ಎಪಿ ರಂಗನಾಥ್ ಸ್ಪರ್ಧಿಸಿ ಸೋಲು ಕಂಡಿದ್ದರು. ಈಗ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮೈತ್ರಿ ಪ್ರಕಾರ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಜೆಡಿಎಸ್ಸಿನ ಎಸ್.ಎಲ್. ಭೋಜೇಗೌಡ ಅವರೇ ಅಭ್ಯರ್ಥಿಯಾಗೋದು ಖಚಿತ. ಹಾಗೆಯೇ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನೂ ಜೆಡಿಎಸ್ ಪಡೆಯುವ ಸಾಧ್ಯತೆ ಇದ್ದು, ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಸೇರಿದಂತೆ ಕೆಲವರು ಆಕಾಂಕ್ಷಿಗಳಿದ್ದಾರೆ. ಬಿಜೆಪಿಯಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಹೊಸಮುಖ ಎ.ಎಚ್.ಆನಂದ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ನಾರಾಯಣ ಸ್ವಾಮಿ, ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಮಾಜಿ ಶಾಸಕ ರಘುಪತಿ ಭಟ್, ವಿಕಾಸ್ ಪುತ್ತೂರು ಹೆಸರು ಮುಂಚೂಣಿಯಲ್ಲಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರ ಕರಾವಳಿಯ ಐದು ಜಿಲ್ಲೆಗಳನ್ನು ಒಳಗೊಂಡಿದ್ದು, ಬಿಜೆಪಿ ಪ್ರಾಬಲ್ಯದ ಕ್ಷೇತ್ರ. ಆದರೆ, ಈ ಕ್ಷೇತ್ರವನ್ನು ಜೆಡಿಎಸ್ಸಿಗೆ ಬಿಟ್ಟು ಕೊಡುವುದಕ್ಕೆ ಸ್ಥಳೀಯ ಬಿಜೆಪಿ ನಾಯಕರ ವಿರೋಧ ಇದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೋಜೇಗೌಡ ಬಗ್ಗೆ ವಿರೋಧಿ ಅಲೆಯಿದ್ದು, ಬಿಜೆಪಿಯಿಂದ ಬಹುತೇಕ ಬಂಡಾಯ ಅಭ್ಯರ್ಥಿ ಸ್ಪರ್ಧಿಸುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಪ್ರಾಬಲ್ಯ ಹೊಂದಿರುವ ಮಾಜಿ ಶಾಸಕ ಸಿಟಿ ರವಿ ಬಹಿರಂಗವಾಗಿಯೇ ಭೋಜೇಗೌಡರ ಬಗ್ಗೆ ವಿರೋಧಿ ನಿಲುವು ಹೊಂದಿದ್ದು, ಜೆಡಿಎಸ್ ಗೆಲುವು ಈ ಕ್ಷೇತ್ರದಲ್ಲಿ ಸುಲಭ ಇಲ್ಲ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮುರಿದುಕೊಳ್ಳಬೇಕು ಎನ್ನುವ ನಿಲುವು ಈ ಭಾಗದ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರಲ್ಲಿದ್ದು ಚುನಾವಣೆಯಲ್ಲಿ ಪ್ರಭಾವ ಬೀರಲಿದೆ.
Former Chief Minister BS Yediyurappa has confirmed that the BJP-JD(S) alliance will continue in the elections to the Legislative Council from the teachers' and graduates' constituencies.
22-06-26 12:51 pm
HK News Staffer
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm