ಬ್ರೇಕಿಂಗ್ ನ್ಯೂಸ್
11-05-24 05:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.11: ವಿಧಾನ ಪರಿಷತ್ತಿಗೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯೇ ಮುಂದುವರಿಯುವುದು ಖಚಿತವಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರೇ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರು ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಹಾಗೂ ಜೆಡಿಎಸ್ಸಿಗೆ ಎರಡು ಸ್ಥಾನ ಹಂಚಿಕೆಯಾಗಲಿದೆ.
ಲೋಕಸಭೆ ಚುನಾವಣೆ ಪೂರ್ವದಲ್ಲಿ ಜೆಡಿಎಸ್, ಎನ್ ಡಿಎ ಮೈತ್ರಿಕೂಟ ಸೇರಿದ ಬೆನ್ನಲ್ಲೇ ಪರಿಷತ್ತಿನ ಏಳು ಸ್ಥಾನಗಳ ಚುನಾವಣೆಯಲ್ಲಿ 4-3 ಸ್ಥಾನಗಳ ಹಂಚಿಕೆ ಬಗ್ಗೆ ನಿರ್ಧಾರವಾಗಿತ್ತು. ರಾಷ್ಟ್ರೀಯ ನಾಯಕರ ಮಟ್ಟದಲ್ಲಿ ಆಗಿರುವ ನಿರ್ಧಾರದಂತೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ಸಿನ ಎಪಿ ರಂಗನಾಥ್ ಸ್ಪರ್ಧಿಸಿ ಸೋಲು ಕಂಡಿದ್ದರು. ಈಗ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮೈತ್ರಿ ಪ್ರಕಾರ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಜೆಡಿಎಸ್ಸಿನ ಎಸ್.ಎಲ್. ಭೋಜೇಗೌಡ ಅವರೇ ಅಭ್ಯರ್ಥಿಯಾಗೋದು ಖಚಿತ. ಹಾಗೆಯೇ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನೂ ಜೆಡಿಎಸ್ ಪಡೆಯುವ ಸಾಧ್ಯತೆ ಇದ್ದು, ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಸೇರಿದಂತೆ ಕೆಲವರು ಆಕಾಂಕ್ಷಿಗಳಿದ್ದಾರೆ. ಬಿಜೆಪಿಯಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಹೊಸಮುಖ ಎ.ಎಚ್.ಆನಂದ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ನಾರಾಯಣ ಸ್ವಾಮಿ, ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಮಾಜಿ ಶಾಸಕ ರಘುಪತಿ ಭಟ್, ವಿಕಾಸ್ ಪುತ್ತೂರು ಹೆಸರು ಮುಂಚೂಣಿಯಲ್ಲಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರ ಕರಾವಳಿಯ ಐದು ಜಿಲ್ಲೆಗಳನ್ನು ಒಳಗೊಂಡಿದ್ದು, ಬಿಜೆಪಿ ಪ್ರಾಬಲ್ಯದ ಕ್ಷೇತ್ರ. ಆದರೆ, ಈ ಕ್ಷೇತ್ರವನ್ನು ಜೆಡಿಎಸ್ಸಿಗೆ ಬಿಟ್ಟು ಕೊಡುವುದಕ್ಕೆ ಸ್ಥಳೀಯ ಬಿಜೆಪಿ ನಾಯಕರ ವಿರೋಧ ಇದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೋಜೇಗೌಡ ಬಗ್ಗೆ ವಿರೋಧಿ ಅಲೆಯಿದ್ದು, ಬಿಜೆಪಿಯಿಂದ ಬಹುತೇಕ ಬಂಡಾಯ ಅಭ್ಯರ್ಥಿ ಸ್ಪರ್ಧಿಸುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಪ್ರಾಬಲ್ಯ ಹೊಂದಿರುವ ಮಾಜಿ ಶಾಸಕ ಸಿಟಿ ರವಿ ಬಹಿರಂಗವಾಗಿಯೇ ಭೋಜೇಗೌಡರ ಬಗ್ಗೆ ವಿರೋಧಿ ನಿಲುವು ಹೊಂದಿದ್ದು, ಜೆಡಿಎಸ್ ಗೆಲುವು ಈ ಕ್ಷೇತ್ರದಲ್ಲಿ ಸುಲಭ ಇಲ್ಲ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮುರಿದುಕೊಳ್ಳಬೇಕು ಎನ್ನುವ ನಿಲುವು ಈ ಭಾಗದ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರಲ್ಲಿದ್ದು ಚುನಾವಣೆಯಲ್ಲಿ ಪ್ರಭಾವ ಬೀರಲಿದೆ.
Former Chief Minister BS Yediyurappa has confirmed that the BJP-JD(S) alliance will continue in the elections to the Legislative Council from the teachers' and graduates' constituencies.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm