ಬ್ರೇಕಿಂಗ್ ನ್ಯೂಸ್
11-05-24 06:57 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಮೇ.11: ಪೊಲೀಸ್ ಪೇದೆಗಳಿಬ್ಬರು ತಮ್ಮ ಬಗ್ಗೆ ಎಸ್ಪಿ ತಾರತಮ್ಯ ಮಾಡುತ್ತಿದ್ದಾರೆ, ಜಾತಿ ಕಾರಣಕ್ಕೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಎಸ್ಪಿ ಕಚೇರಿ ಮುಂದೆ ತಮ್ಮ ಕುಟುಂಬದೊಂದಿಗೆ ಧರಣಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ಆಶೋಕ್ ಹಾಗೂ ಚೇಳೂರು ಪೊಲೀಸ್ ಠಾಣೆ ಪೇದೆ ನರಸಿಂಹಮೂರ್ತಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.

2023ರ ಆಗಸ್ಟ್ ನಲ್ಲಿ ಮನಿ ಡಬ್ಲಿಂಗ್ ಪ್ರಕರಣ ಒಂದರಲ್ಲಿ ಪೇದೆಗಳಾದ ಆಶೋಕ್ ಹಾಗೂ ನರಸಿಂಹಮೂರ್ತಿ ವಿರುದ್ದ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಆರೋಪಿಗಳ ಜೊತೆಗೆ ಶಾಮೀಲಾಗಿರುವ ಆರೋಪ ಇದ್ದುದರಿಂದ, ಇಬ್ಬರನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆ ನಡೆಸಲಾಗುತ್ತಿತ್ತು. ಅಮಾನತು ಆದೇಶ ರದ್ದು ಮಾಡಿ ಮಂಚೇನಹಳ್ಳಿ ಹಾಗೂ ಚೇಳೂರು ಠಾಣೆಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು.
ಇಲಾಖಾ ವಿಚಾರಣೆಗೆ ಹಾಜರಾಗದೇ ಕಾಲಹರಣ ಮಾಡಿದ್ದ ಪೇದೆಗಳು ಮತ್ತೆ ಕಾಲಾವಾಕಾಶ ಕೋರಿದ್ದರು. ಈ ವಿಚಾರದಲ್ಲಿ ವಿಚಾರಣೆ ನಡೆಸುತ್ತಿರುವ ಅಧಿಕಾರಿ, ಸಮಪರ್ಕವಾಗಿ ಸ್ಪಂದಿಸಿಲ್ಲ. ಎಸ್ಪಿ ಡಿ.ಎಲ್ ನಾಗೇಶ್ ಪ್ರಕರಣದಲ್ಲಿ ನಮ್ಮ ವಾದ ಕೇಳದೇ ನೇರವಾಗಿ ಅಮಾನತು ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಕೆಳ ಜಾತಿ ಎಂದು ಜಾತಿ ತಾರತಮ್ಮ ಮಾಡಿದ್ದಾಗಿ ಆರೋಪಿಸಿದ್ದಾರೆ.
ಎಸ್ಪಿ ಕಚೇರಿ ಎದುರು ಹೆಂಡತಿ ಮಕ್ಕಳ ಸಮೇತ ಆಗಮಿಸಿ ಅಂಬೇಡ್ಕರ್ ಪೋಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಎಸ್ಪಿ ಖಾಸೀಂ ಸಾಬ್ ಪ್ರತಿಭಟನಾ ನಿರತ ಪೇದೆಗಳ ಮನವೊಲಿಸಿ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
Chikkaballapur two police constable protest with family sitting at SP office, demanding justice. Constables alleged that SP D L Nagesh is not cooperating neither listening to their probelms they added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm