ಬ್ರೇಕಿಂಗ್ ನ್ಯೂಸ್
11-05-24 06:57 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಮೇ.11: ಪೊಲೀಸ್ ಪೇದೆಗಳಿಬ್ಬರು ತಮ್ಮ ಬಗ್ಗೆ ಎಸ್ಪಿ ತಾರತಮ್ಯ ಮಾಡುತ್ತಿದ್ದಾರೆ, ಜಾತಿ ಕಾರಣಕ್ಕೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಎಸ್ಪಿ ಕಚೇರಿ ಮುಂದೆ ತಮ್ಮ ಕುಟುಂಬದೊಂದಿಗೆ ಧರಣಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ಆಶೋಕ್ ಹಾಗೂ ಚೇಳೂರು ಪೊಲೀಸ್ ಠಾಣೆ ಪೇದೆ ನರಸಿಂಹಮೂರ್ತಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
2023ರ ಆಗಸ್ಟ್ ನಲ್ಲಿ ಮನಿ ಡಬ್ಲಿಂಗ್ ಪ್ರಕರಣ ಒಂದರಲ್ಲಿ ಪೇದೆಗಳಾದ ಆಶೋಕ್ ಹಾಗೂ ನರಸಿಂಹಮೂರ್ತಿ ವಿರುದ್ದ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಆರೋಪಿಗಳ ಜೊತೆಗೆ ಶಾಮೀಲಾಗಿರುವ ಆರೋಪ ಇದ್ದುದರಿಂದ, ಇಬ್ಬರನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆ ನಡೆಸಲಾಗುತ್ತಿತ್ತು. ಅಮಾನತು ಆದೇಶ ರದ್ದು ಮಾಡಿ ಮಂಚೇನಹಳ್ಳಿ ಹಾಗೂ ಚೇಳೂರು ಠಾಣೆಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು.
ಇಲಾಖಾ ವಿಚಾರಣೆಗೆ ಹಾಜರಾಗದೇ ಕಾಲಹರಣ ಮಾಡಿದ್ದ ಪೇದೆಗಳು ಮತ್ತೆ ಕಾಲಾವಾಕಾಶ ಕೋರಿದ್ದರು. ಈ ವಿಚಾರದಲ್ಲಿ ವಿಚಾರಣೆ ನಡೆಸುತ್ತಿರುವ ಅಧಿಕಾರಿ, ಸಮಪರ್ಕವಾಗಿ ಸ್ಪಂದಿಸಿಲ್ಲ. ಎಸ್ಪಿ ಡಿ.ಎಲ್ ನಾಗೇಶ್ ಪ್ರಕರಣದಲ್ಲಿ ನಮ್ಮ ವಾದ ಕೇಳದೇ ನೇರವಾಗಿ ಅಮಾನತು ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಕೆಳ ಜಾತಿ ಎಂದು ಜಾತಿ ತಾರತಮ್ಮ ಮಾಡಿದ್ದಾಗಿ ಆರೋಪಿಸಿದ್ದಾರೆ.
ಎಸ್ಪಿ ಕಚೇರಿ ಎದುರು ಹೆಂಡತಿ ಮಕ್ಕಳ ಸಮೇತ ಆಗಮಿಸಿ ಅಂಬೇಡ್ಕರ್ ಪೋಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಎಸ್ಪಿ ಖಾಸೀಂ ಸಾಬ್ ಪ್ರತಿಭಟನಾ ನಿರತ ಪೇದೆಗಳ ಮನವೊಲಿಸಿ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
Chikkaballapur two police constable protest with family sitting at SP office, demanding justice. Constables alleged that SP D L Nagesh is not cooperating neither listening to their probelms they added.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am