ಬ್ರೇಕಿಂಗ್ ನ್ಯೂಸ್
11-05-24 06:57 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಮೇ.11: ಪೊಲೀಸ್ ಪೇದೆಗಳಿಬ್ಬರು ತಮ್ಮ ಬಗ್ಗೆ ಎಸ್ಪಿ ತಾರತಮ್ಯ ಮಾಡುತ್ತಿದ್ದಾರೆ, ಜಾತಿ ಕಾರಣಕ್ಕೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಎಸ್ಪಿ ಕಚೇರಿ ಮುಂದೆ ತಮ್ಮ ಕುಟುಂಬದೊಂದಿಗೆ ಧರಣಿ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆ ಆಶೋಕ್ ಹಾಗೂ ಚೇಳೂರು ಪೊಲೀಸ್ ಠಾಣೆ ಪೇದೆ ನರಸಿಂಹಮೂರ್ತಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.

2023ರ ಆಗಸ್ಟ್ ನಲ್ಲಿ ಮನಿ ಡಬ್ಲಿಂಗ್ ಪ್ರಕರಣ ಒಂದರಲ್ಲಿ ಪೇದೆಗಳಾದ ಆಶೋಕ್ ಹಾಗೂ ನರಸಿಂಹಮೂರ್ತಿ ವಿರುದ್ದ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮನಿ ಡಬ್ಲಿಂಗ್ ಪ್ರಕರಣದಲ್ಲಿ ಆರೋಪಿಗಳ ಜೊತೆಗೆ ಶಾಮೀಲಾಗಿರುವ ಆರೋಪ ಇದ್ದುದರಿಂದ, ಇಬ್ಬರನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆ ನಡೆಸಲಾಗುತ್ತಿತ್ತು. ಅಮಾನತು ಆದೇಶ ರದ್ದು ಮಾಡಿ ಮಂಚೇನಹಳ್ಳಿ ಹಾಗೂ ಚೇಳೂರು ಠಾಣೆಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು.
ಇಲಾಖಾ ವಿಚಾರಣೆಗೆ ಹಾಜರಾಗದೇ ಕಾಲಹರಣ ಮಾಡಿದ್ದ ಪೇದೆಗಳು ಮತ್ತೆ ಕಾಲಾವಾಕಾಶ ಕೋರಿದ್ದರು. ಈ ವಿಚಾರದಲ್ಲಿ ವಿಚಾರಣೆ ನಡೆಸುತ್ತಿರುವ ಅಧಿಕಾರಿ, ಸಮಪರ್ಕವಾಗಿ ಸ್ಪಂದಿಸಿಲ್ಲ. ಎಸ್ಪಿ ಡಿ.ಎಲ್ ನಾಗೇಶ್ ಪ್ರಕರಣದಲ್ಲಿ ನಮ್ಮ ವಾದ ಕೇಳದೇ ನೇರವಾಗಿ ಅಮಾನತು ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಕೆಳ ಜಾತಿ ಎಂದು ಜಾತಿ ತಾರತಮ್ಮ ಮಾಡಿದ್ದಾಗಿ ಆರೋಪಿಸಿದ್ದಾರೆ.
ಎಸ್ಪಿ ಕಚೇರಿ ಎದುರು ಹೆಂಡತಿ ಮಕ್ಕಳ ಸಮೇತ ಆಗಮಿಸಿ ಅಂಬೇಡ್ಕರ್ ಪೋಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಎಸ್ಪಿ ಖಾಸೀಂ ಸಾಬ್ ಪ್ರತಿಭಟನಾ ನಿರತ ಪೇದೆಗಳ ಮನವೊಲಿಸಿ ಅಹವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
Chikkaballapur two police constable protest with family sitting at SP office, demanding justice. Constables alleged that SP D L Nagesh is not cooperating neither listening to their probelms they added.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm