ಬ್ರೇಕಿಂಗ್ ನ್ಯೂಸ್
12-05-24 10:51 am HK News Desk ಕರ್ನಾಟಕ
ಹಾಸನ, ಮೇ 12: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತರಾಗಿದ್ದ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದೇವರಾಜೇಗೌಡ ಅವರನ್ನು ಶುಕ್ರವಾರ ಚಿತ್ರದುರ್ಗದ ಹಿರಿಯೂರು ಬಳಿ ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಹೊಳೆನರಸೀಪುರ ಪೊಲೀಸರಿಗೆ ಹಸ್ತಾಂತರಿಸಲಾಗಿತ್ತು. ಈ ವೇಳೆ ಲೈಂಗಿಕ ದೌರ್ಜನ್ಯದ ಕೇಸ್ನಲ್ಲಿ ಪೊಲೀಸರು ಬಂಧಿಸಿ, ಹೊಳೆನರಸೀಪುರ ಪಟ್ಟಣದ ಅರಕಲಗೂಡು ರಸ್ತೆಯಲ್ಲಿರೋ ನ್ಯಾಯಾಧೀಶರ ಮನೆಯಲ್ಲಿ ನ್ಯಾಯಾಧೀಶರೆದುರು ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ದೇವರಾಜೇಗೌಡರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯದ ಕೇಸ್ ಮೇಲೆ ದೇವರಾಜೇಗೌಡನನ್ನ ಪೊಲೀಸರು ಬಂಧಿಸಿದ್ದರು. ಈ ಕೇಸ್ನಲ್ಲಿ ಇದೀಗ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಶನಿವಾರ ಬೆಳಿಗ್ಗೆಯಿಂದ ದೇವರಾಜೇಗೌಡರನ್ನ ವಿಚಾರಣೆ ನಡೆಸಿದ ಪೊಲೀಸರು, ಸಂಜೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ಬಳಿಕ ಪ್ರಿನ್ಸಿಪಲ್ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಸಿದ್ರಾಮ್ ಅವರ ಮನೆಯಲ್ಲಿ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.
ಇನ್ನು ನ್ಯಾಯಾಧೀಶರ ಆದೇಶ ಹೊರಬೀಳುತ್ತಿದ್ದಂತೆ ಹಾಸನ ಜಿಲ್ಲಾ ಕಾರಾಗೃಹಕ್ಕೆ ವಕೀಲ ದೇವರಾಜೇಗೌಡನನ್ನ ಹೊಳೆನರಸೀಪುರ ಠಾಣೆ ಪೊಲೀಸರು ಸ್ಥಳಾಂತರಿಸಿದರು. ಈ ವೇಳೆ ಮಾತನಾಡಿದ ಗೌಡ, ಇನ್ನು ಎಂಟು ದಿನದಲ್ಲಿ ಹೊರಗೆ ಬರ್ತೇನೆ. ಸತ್ಯಕ್ಕೆ ಎಂದೂ ಜಯ ಇದೆ ಅಂತ ಹೇಳುತ್ತಲೇ, ಜೈಲಿಗೆ ಹೊರಟ್ರು.
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಕೀಲನ ವಿರುದ್ಧ ಪ್ರಕರಣ ದಾಖಲಾಗಿತ್ತು. ಏಪ್ರಿಲ್ 1ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ಥ ಮಹಿಳೆ ದೂರು ನೀಡಿದ್ದು, ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿತ್ತು.
BJP leader and advocate G Devaraje Gowda was arrested in connection with a sex abuse video allegedly belonging to Hassan JD(S) MP Prajwal Revanna. According to police, Devaraje Gowda was arrested at Gulihal tollgate by the Hiriyur police in this district on Friday night for leaking the video in a pen drive.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm