ಬ್ರೇಕಿಂಗ್ ನ್ಯೂಸ್
13-05-24 04:34 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ಅಶ್ಲೀಲ ಪೆನ್ಡ್ರೈವ್ ಪ್ರಕರಣದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 15 ರಂದು ಜರ್ಮನಿಯಿಂದ ಬೆಂಗಳೂರಿಗೆ ಹಿಂತಿರುಗಲು ಕಾಯ್ದಿರಿಸಿದ್ದ ವಿಮಾನದ ಟಿಕೆಟನ್ನು ದಿಢೀರ್ ರದ್ದುಗೊಳಿಸಿದ್ದು ಬಂಧನದ ನಿರೀಕ್ಷೆ ಇಟ್ಟುಕೊಂಡಿದ್ದ ಎಸ್ಐಟಿ ತಂಡವನ್ನು ತಬ್ಬಿಬ್ಬುಗೊಳಿಸಿದ್ದಾರೆ.
ಈವರೆಗೂ ಮೇ 15ರ ವಿಮಾನ ಟಿಕೆಟ್ ಬುಕ್ ಆಗಿದ್ದರಿಂದ ಇನ್ನೆರಡು ದಿನದಲ್ಲಿ ಬರಬಹುದು ಎಂಬ ನಿರೀಕ್ಷೆ ಇತ್ತು. ಹಾಗಿದ್ದರೂ ಎಸ್ಐಟಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಪ್ರಜ್ವಲ್ ವಿದೇಶದಲ್ಲಿ ಅಡಗಿರುವ ಜಾಗವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ ಮೇ 3ರಂದು ನಿಗದಿಯಾಗಿದ್ದ ವಿಮಾನದ ಟಿಕೆಟನ್ನು ಮೇ 15ಕ್ಕೆ ಮುಂದೂಡಿದ್ದರು. ಈಗ ಎರಡು ದಿನ ಇರುವಾಗ ಟಿಕೆಟ್ ರದ್ದುಗೊಳಿಸಿದ್ದು ಎಸ್ಐಟಿ ತಂಡವನ್ನು ದಿಕ್ಕು ತಪ್ಪಿಸಲು ಪ್ರಜ್ವಲ್ ಈ ರೀತಿ ಮಾಡುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಬೆಂಗಳೂರಿನಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ, ಪ್ರಜ್ವಲ್ ಸದ್ಯ ಬೆಂಗಳೂರಿಗೆ ವಾಪಸಾಗುವುದು ಅನುಮಾನ ಎನ್ನಲಾಗುತ್ತಿದೆ.
ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸುವ ಮುನ್ನವೇ ಪ್ರಜ್ವಲ್ ಜರ್ಮನಿಗೆ ಹಾರಿದ್ದರು. ಆನಂತರ, ಬೇರೆ ದೇಶಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು. ಆದರೆ ಯಾವ ದೇಶದಲ್ಲಿ ಅಡಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿದ್ದರೂ ಪ್ರಜ್ವಲ್ ವಿಮಾನ, ಹಡಗಿನಲ್ಲಿ ಪ್ರಯಾಣಿಸದ ಹೊರತು ಎಲ್ಲಿದ್ದಾರೆಂಬ ಬಗ್ಗೆ ಸಣ್ಣ ಸುಳಿವು ಕೂಡ ಎಸ್ಐಟಿಗೆ ಸಿಗಲ್ಲ. ಸದ್ಯಕ್ಕೆ ವಿದೇಶದಲ್ಲಿ ಇರುವುದರಿಂದ ಅವರನ್ನು ಪತ್ತೆ ಹಚ್ಚಿ ಬಂಧಿಸುವುದೇ ಎಸ್ಐಟಿಗೆ ಸವಾಲಾಗಿದೆ.
Prajwal Revanna, an accused in the pornographic pen drive case, has suddenly cancelled the ticket of a flight he had booked to return to Bengaluru from Germany on May 15, much to the consternation of the SIT team that was expecting his arrest.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm