ಬ್ರೇಕಿಂಗ್ ನ್ಯೂಸ್
14-05-24 05:49 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.14: ರೇವಣ್ಣ ಅವರಿಗೆ ಜಾಮೀನು ದೊರೆತಿದೆ ಎಂದು ಸಂತಸ ಪಡುವ ಹಾಗಿಲ್ಲ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದಾಗಿದ್ದು, ಸಂತಸಪಡುವ ಸಮಯ ಇದಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಪಡುವುದು ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ಹೇಳಿದರು.

ನಿಮಗೆ ಜನ್ಮಕೊಟ್ಟ ತಂದೆ-ತಾಯಿ ಇದ್ದಾರೆ, ಒಡಹುಟ್ಟಿದವರಿದ್ದಾರೆ. ಪೆನ್ಡ್ರೈವ್ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಎಸ್ಐಟಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ. ಎಸ್ಐಟಿ ತನಿಖೆ ವರದಿ ಶಾಸಕರಿಗೆ ಸರಬರಾಜಾಗುತ್ತಿದೆಯಾ? ನಮ್ಮ ರಾಜ್ಯದಲ್ಲಿ ದೊಡ್ಡ ತಿಮಿಂಗಿಲ ಇದೆ. ಆ ತಿಮಿಂಗಿಲ ಯಾರೆಂದು ರಾಜ್ಯದ ಜನರಿಗೂ ಗೊತ್ತಿದೆ. ಏಪ್ರಿಲ್ 22ರಂದು ದಾಖಲಾದ ಎಫ್ಐಆರ್ಗೆ ಸಂಬಂಧಿಸಿ ಒಬ್ಬರನ್ನೂ ಬಂಧಿಸಿಲ್ಲ. ನವೀನ್ ಗೌಡ ನಮ್ಮ ಪಕ್ಷದವರಿಗೆ ಪೆನ್ಡ್ರೈವ್ ಕೊಟ್ಟಿದ್ದೆ ಎಂದು ಹೇಳಿದ್ದಾನೆ. ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಹೋಗುತ್ತಿದೆ ನೋಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಲೇ ಈ ಬಗ್ಗೆ ಏನೂ ಹೇಳಲು ಹೋಗುವುದಿಲ್ಲ. ನನ್ನ ಬಳಿ ಎಲ್ಲ ದಾಖಲೆಗಳಿವೆ. ಈಗಲೇ ನಾನು ಏನೂ ಹೇಳಲ್ಲ ಎಂದು ತಿಳಿಸಿದರು. ರೇವಣ್ಣ ಕುಟುಂಬ ಮುಗಿಸಲು ಪ್ಲ್ಯಾನ್ ಮಾಡ್ತಿದ್ದೇನೆಂದು ಹಲವರು ಮಾತನಾಡಿಕೊಳ್ಳುತ್ತಿದ್ದಾರೆ. ನಾನು ನ್ಯಾಯದ ಪರವಾಗಿ ಇದ್ದೇನೆ. ಇಂತಹ ಘಟನೆ ಮತ್ತೆ ಪುನರಾವರ್ತನೆಯಾಗಬಾರದು. ಯಾವುದೇ ಮುಲಾಜಿಗೆ ಒಳಗಾಗದೇ ತನಿಖೆ ಆಗಬೇಕು. ಮಹಿಳಾ ಸಂತ್ರಸ್ತೆಯರ ಪರ ಹೋರಾಟ ಮಾಡುತ್ತೇನೆ. ಪೆನ್ಡ್ರೈವ್ ಪ್ರಕರಣ ದೊಡ್ಡ ಮಟ್ಟದಲ್ಲಿ ನಡೆದಿದೆ. ಇನ್ನೂ ಸಮಯ ಇದೆ, ನಾನು ದುಡುಕಲ್ಲ ಎಂದರು.
Former Chief Minister and JD(S) state chief H.D. Kumaraswamy said on Tuesday that this was not the time for him and the party to celebrate.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm