ಬ್ರೇಕಿಂಗ್ ನ್ಯೂಸ್
16-05-24 07:17 pm HK News Desk ಕರ್ನಾಟಕ
ಹಾಸನ, ಮೇ.16: ಶಾಲೆಗೆ ರಜೆ ಇರುವುದರಿಂದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ.

ಮುತ್ತಿಗೆ ಗ್ರಾಮದ ಬಾಲಕರಾದ ಜೀವನ್(13), ಸಾತ್ವಿಕ್(11), ವಿಶ್ವ ಹಾಗೂ ಪೃಥ್ವಿ (12) ಮೃತರು. ಇನ್ನೊಬ್ಬ ಬಾಲಕ ಚಿರಾಗ್ (10) ಬದುಕುಳಿದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲೆಗೆ ರಜೆ ಇರುವುದರಿಂದ ಕೆರೆಗೆ ಮಕ್ಕಳು ಈಜಲು ಹೋಗಿದ್ದರು. ಈ ವೇಳೆ ಮೀನು ಹಿಡಿಯುವ ಮೋಜಿಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಕೆರೆಯಲ್ಲಿ ಮೀನು ಹಿಡಿಯುವುದಕ್ಕೆ ಆಳದ ನೀರಿಗೆ ಇಳಿದಿದ್ದಾರೆ. ಆಗ ಮಕ್ಕಳು ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನೀರಲ್ಲಿ ಮುಳುಗಿದ ಬಾಲಕರಿಗಾಗಿ ಹುಡುಕಾಟ ಆರಂಭಿಸಿದೆ. ಇಬ್ಬರ ಬಾಲಕರ ಮೃತದೇಹ ಹೊರತೆಗೆದಿದ್ದಾರೆ.
ಸ್ಥಳಕ್ಕೆ ಆಗಮಿಸಿದ್ದ ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳ ಶವ ಹೊರತೆಗೆಯುವ ಕಾರ್ಯಾಚರಣೆ ಚುರುಕಾಗಿ ನಡೆಸುವಂತೆ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಸೂಚಿಸಿದರು. ಈ ವೇಳೆ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
Four minor youths drowned while catching fish in lake at Hassan. Four youths who went to swim in the lake later began to catch fishes after which they drowned in the water. Two bodies have been found the police are now searching for the other two bodies
25-02-26 07:54 pm
HK News Staffer
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
ದೇಶದಲ್ಲೇ ಮೊದಲು ; ಕೇರಳ ನಾಗರಿಕರಿಗೆ ನೇಟಿವಿಟಿ ಕಾರ...
25-02-26 01:48 pm
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
25-02-26 03:38 pm
HK News Staffer
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
25-02-26 05:41 pm
HK News Staffer
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm