ಬ್ರೇಕಿಂಗ್ ನ್ಯೂಸ್
17-05-24 12:30 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.17: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಹತ್ಯೆಯ ಆರೋಪಿಯನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಕೊಲೆ ಆರೋಪಿ ಗಿರೀಶ್ ಸಾವಂತ್ ನನ್ನ ದಾವಣಗೆರೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲ್ವೇ ಪೊಲೀಸರ ಸಹಾಯದಿಂದ ಗಿರೀಶ್ನನ್ನು ಬಂಧಿಸಲಾಗಿದ್ದು, ಸದ್ಯ ಆತ ಕೋಮಾದಲ್ಲಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರೈಲಿನಿಂದ ಜಿಗಿದ ಆರೋಪಿಯನ್ನು ರೈಲ್ವೇ ಪೊಲೀಸರು ವಶಕ್ಕೆ ಪಡೆದು ಬಳಿಕ ಹುಬ್ಬಳ್ಳಿ-ಧಾರವಾಡ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಅಂಜಲಿ ಕೊಲೆ ಮಾಡಿದ್ದಲ್ಲದೇ ಮತ್ತೊಂದು ಕೊಲೆ ಮಾಡಲು ಹೋಗಿ ಕಿರಾತಕ ವಿಶ್ವ ಈಗ ಅರೆಸ್ಟ್ ಆಗಿದ್ದಾನೆ.\


ವಿಶ್ವ ಪರಾರಿಯಾಗಿ ದಾವಣಗೆರೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ರೈಲಿನಲ್ಲಿ ಮಹಿಳೆ ಜೊತೆ ಗಲಾಟೆ ಮಾಡಿ ಸಿಟ್ಟಾಗಿ ಚಾಕು ಹಾಕಲು ಮುಂದಾಗಿದ್ದ
ಈ ವಿಚಾರ ತಿಳಿಯುತ್ತಿದ್ದಂತೆ ಪ್ರಯಾಣಿಕರು ಆತನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದರು. ಜನರಿಂದ ತಪ್ಪಿಸಿಕೊಳ್ಳಲು ವಿಶ್ವ ರೈಲಿನಿಂದ ಜಿಗಿದಿದ್ದ. ಹಳಿಯಲ್ಲಿ ಬಿದ್ದು ಗಾಯಗೊಂಡಿದ್ದ ಈತನನ್ನು ದಾವಣಗೆರೆ ರೈಲ್ವೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ವಿಶ್ವನ ವಿಳಾಸ ಇತ್ಯಾದಿ ಮಾಹಿತಿಗಳನ್ನು ಪರಿಶೀಲಿಸಿದಾಗ ಈತನೇ ಅಂಜಲಿಯನ್ನು ಕೊಲೆ ಮಾಡಿದ ಆರೋಪಿ ಎನ್ನುವುದು ಪೊಲೀಸರಿಗೆ ದೃಢಪಡುತ್ತದೆ. ಬಳಿಕ ಆತನನ್ನು ವಶಕ್ಕೆ ಪಡೆದ ಹುಬ್ಬಳ್ಳಿ - ಧಾರವಾಡ ಪೊಲೀಸರು ಹುಬ್ಬಳ್ಳಿಗೆ ಕರೆತಂದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಪ್ರತಿಕ್ರಿಯಿಸಿದ್ದು, ಬುಧವಾರ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗಾಗಿ ಎಂಟು ತಂಡವನ್ನು ನಾವು ರಚನೆ ಮಾಡಿದ್ದೇವು. ಗುರುವಾರ ರೈಲ್ವೇ ಪೊಲೀಸರ ಸಹಾಯದಿಂದ ಆರೋಪಿ ಸಿಕ್ಕಿದ್ದಾನೆ. ಆರೋಪಿ ಗಿರೀಶ್ ತಲೆ ಮತ್ತು ಬೆನ್ನಿಗೆ ಗಂಭೀರ ಗಾಯವಾಗಿದೆ, ಸದ್ಯ ಕೋಮಾ ಸ್ಟೇಜ್ನಲ್ಲಿದ್ದಾನೆ ಎಂದು ಹೇಳಿದ್ದಾರೆ.
ಬೈಕ್ ಕಳ್ಳತನ ವಿಚಾರದಲ್ಲಿ ಗಿರೀಶ್ ಮೇಲೆ 4 ಪ್ರಕರಣಗಳು ದಾಖಲು ಆಗಿದ್ದವು. ಅವನು ಹೇಳುವ ಪ್ರಕಾರ ನಾವಿಬ್ಬರು ಪ್ರೀತಿ ಮಾಡ್ತಿದ್ವಿ, ಹುಡುಗಿ ನನ್ನ ಫೋನ್ ಅನ್ನು ಬ್ಲಾಕ್ ಮಾಡಿದ್ಲು ಅಂತಾ ಹೇಳ್ತಿದ್ದಾನೆ. ಅವನಿಗೆ ಪ್ರಜ್ಞೆ ಬಂದ ನಂತರ ಹೇಳಿಕೆ ಪಡೆದುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
15 ಮೇ ಬುಧವಾರ ಬೆಳಗ್ಗೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂಜಲಿ ಎಂಬ ಯುವತಿಯ ಹತ್ಯೆಯಾಗಿತ್ತು. ಗಿರೀಶ್ ಎಂಬ ಯುವಕ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂದು ಬೆಳ್ಳಂಬೆಳಗ್ಗೆಯೇ ಯುವತಿಯ ಮನೆಗೆ ನುಗ್ಗಿ ಮನಸೋ ಇಚ್ಛೇ ಚಾಕುವಿನಿಂದ ಇರಿದಿದ್ದ. ಈ ಹಿನ್ನೆಲೆ ತೀವ್ರ ರಕ್ತಸ್ರಾವದಿಂದ ಅಂಜಲಿ ಮೃತಪಟ್ಟಿದ್ದಳು.
Hubballi Anjali murder case, accused Vishwa has been arrested by Davangere police after he jumped from a moving train trying to stab a women. Passengers in the train thrahsed him during which he jumped from the train.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm