ಬ್ರೇಕಿಂಗ್ ನ್ಯೂಸ್
18-05-24 07:24 pm HK News Desk ಕರ್ನಾಟಕ
ಶಿವಮೊಗ್ಗ, ಮೇ.18: ನಗರದ ಪಿಇಎಸ್ ಕಾಲೇಜು ಸಭಾಂಗಣದಲ್ಲಿ ಶನಿವಾರ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಪಿಎಸ್ ಕಾಲೇಜಿನ ಆಡಳಿತ ಸಂಯೋಜಕ ಡಾ.ನಾಗರಾಜ್ ಮಾತನಾಡಿ, ಧನಂಜಯ ಸರ್ಜಿ ಅವರು ರಾಜ್ಯದ ಹೆಸರಾಂತ ಮಕ್ಕಳ ತಜ್ಞರು, ವಿದ್ಯಾವಂತರು ರಾಜಕೀಯಕ್ಕೆ ಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ಬಾರಿ ಹೇಳುತ್ತಲೇ ಇರುತ್ತಾರೆ , ಅಂತೆಯೇ ಡಾ. ಧನಂಜಯ ಸರ್ಜಿ ಇಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಮ್ಮ ಮುಂದಿದ್ದಾರೆ. ಕೃಷಿ ಮತ್ತು ವ್ಯಾಪಾರ ಕುಟುಂಬದ ಹಿನ್ನೆಲೆಯಲ್ಲಿ ಬಂದ ಸರ್ಜಿ, ಉತ್ತಮ ಸೇವೆ ಸಲ್ಲಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಇದೀಗ ನೈರುತ್ಯ ಪದವೀಧರ ಕ್ಷೇತ್ರದ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಸರ್ಜಿ ಅವರಿಗೆ ಮತ ಹಾಕುವುದರ ಮೂಲಕ ಈ ಬಾರಿ ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಮನವಿ ಮಾಡಿದರು.
ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್. ದತ್ತಾತ್ರಿ ಮಾತನಾಡಿ, ಕಳೆದ ಮೂವತ್ತು ವರ್ಷಗಳಿಂದ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಈ ಹಿಂದೆ ನೈರುತ್ಯ ಪದವೀಧರ ಕ್ಷೇತ್ರವನ್ನು ಡಿ.ಎಚ್. ಶಂಕರಮೂರ್ತಿ ಪ್ರತಿನಿಧಿಸುತ್ತಿದ್ದರು ಈ ಬಾರಿ ಡಾ. ಧನಂಜಯ ಸರ್ಜಿ ಅವರಿಗೆ ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ನಾವೆಲ್ಲರೂ ಸರ್ಜಿ ಅವರ ರಾಯಭಾರಿಗಳಾಗಿ ಕೆಲಸ ಮಾಡಬೇಕು ಎಂದರು.





ಈ ಚುನಾವಣೆಯಲ್ಲಿ ಇವಿಎಂ ಇರುವುದಿಲ್ಲ, ಬದಲಾಗಿ ಬ್ಯಾಲೆಟ್ ಪೇಪರ್ ಇರುತ್ತದೆ, ತಾವೆಲ್ಲರೂ ಡಾ.ಧನಂಜಯ ಸರ್ಜಿ ಹೆಸರಿನ ಮುಂದೆ ಒಂದು ಗೆರೆ ಎಳೆಯುವ ಮೂಲಕ ಮೊದಲ ಪ್ರಾಶಸ್ತ್ಯದ ಮತವನ್ನು ಹಾಕಬೇಕು. ಮಧ್ಯ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರಖ್ಯಾತಿ ಹೊಂದಿರುವ ಡಾ.ಸರ್ಜಿ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಹೋದರೆ ಪದವೀಧರರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಫಲರಾಗುತ್ತಾರೆ ಎಂದು ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿ, ಹುಟ್ಟಿದಾಗ ಹೆಸರು ಇರುವುದಿಲ್ಲ, ಉಸಿರು ಇರುತ್ತದೆ, ಮರಣ ಹೊಂದಿದ ಮೇಲೆ ಉಸಿರು ಇರುವುದಿಲ್ಲ, ಹೆಸರು ಇರುತ್ತದೆ, ಹುಟ್ಟು ಮತ್ತು ಸಾವುಗಳ ನಡುವೆ ನಾವು ಸಾಧನೆಗಳನ್ನು ಮಾಡಿ ಹೆಸರನ್ನ ಸಂಪಾದಿಸಬೇಕು. ರೈತರು, ಯೋಧರಂತೆ ದೇಶದ ಬೆನ್ನೆಲುಬು ಪದವೀಧರರು. ದೇಶದ ಭವ್ಯ ಭವಿಷ್ಯದ ನಿರ್ಮಾಣದಲ್ಲಿ ಪದವೀಧರರ ಪಾತ್ರ ಬಹಳ ಮುಖ್ಯ. ಪದವೀಧರರ ಸಮಸ್ಯೆಗಳನ್ನು ಅತಿ ಹತ್ತಿರದಿಂದ ಬಲ್ಲವನಾಗಿದ್ದು, ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.
ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ಎಚ್. ಮಾಲತೇಶ್ ಹಾಜರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ಪದವೀಧರರು ಹಾಜರಿದ್ದರು.
Vote for Dr Dhananjaya Sarji in Vidhan Parishad elections says Dr Nagraj in Shivamogga. P s college adminstration Nagraj has stood has support to make Dr Dhananjaya Sarji win the coming Vidhan Parishad elections.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm