ಬ್ರೇಕಿಂಗ್ ನ್ಯೂಸ್
18-05-24 08:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ.
ಆರೋಪಿಯನ್ನು ಆನೆಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. 15 ವರ್ಷದ ತಮ್ಮ ಪ್ರಾಣೇಶ್ ಮೊಬೈಲ್ ತೆಗೆದುಕೊಂಡು ದಿನವಿಡೀ ಗೇಮ್ ಆಡಿದ್ದಕ್ಕೆ ಆಕ್ರೋಶಗೊಂಡು ಆತನನ್ನು ಕೊಂದಿರುವುದಾಗಿ ಶಿವಕುಮಾರ್ ಸರ್ಜಾಪುರ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.
ಮೇ 15 ರಂದು ಏಳನೇ ತರಗತಿಯ ವಿದ್ಯಾರ್ಥಿ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದ. ಪೋಷಕರು ಮಗನಿಗಾಗಿ ಹುಡುಕಾಟ ಆರಂಭಿಸಿದ ಬಳಿಕ ಶಿವಕುಮಾರ್, ಪ್ರಾಣೇಶ್ ನನ್ನು ಯಾರೋ ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಶವ ನೋಡಿರುವುದಾಗಿ ಹೇಳಿದ್ದಾನೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಸರ್ಜಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು ವಿಚಾರಣೆ ವೇಳೆ ಶಿವಕುಮಾರ್ ಹೇಳಿಕೆ ಬದಲಾಯಿಸಿದ್ದಾನೆ. ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ನಿಜ ವಿಷಯ ಬಾಯಿ ಬಿಟ್ಟಿದ್ದಾನೆ.
ಶಿವಕುಮಾರ್ ತಮ್ಮನ ತಲೆ ಮತ್ತು ಹೊಟ್ಟೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ಸುತ್ತಿಗೆಯನ್ನ ತೆಗೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ
ಆಂಧ್ರದ ಕರ್ನೂಲ್ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆಯಿದ್ದ ಹಿನ್ನೆಲೆ ಬೆಂಗಳೂರಿನ ಮನೆಗೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್ನ ಮೊಬೈಲ್ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್ಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪ್ರಾಣೇಶ್ತಲೆ, ಹೊಟ್ಟೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
Bangalore elder brother kills brother for using his mobile phone to play games. The arrested has been identified as Shivakumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm