ಬ್ರೇಕಿಂಗ್ ನ್ಯೂಸ್
18-05-24 08:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಅಣ್ಣ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ.
ಆರೋಪಿಯನ್ನು ಆನೆಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. 15 ವರ್ಷದ ತಮ್ಮ ಪ್ರಾಣೇಶ್ ಮೊಬೈಲ್ ತೆಗೆದುಕೊಂಡು ದಿನವಿಡೀ ಗೇಮ್ ಆಡಿದ್ದಕ್ಕೆ ಆಕ್ರೋಶಗೊಂಡು ಆತನನ್ನು ಕೊಂದಿರುವುದಾಗಿ ಶಿವಕುಮಾರ್ ಸರ್ಜಾಪುರ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.
ಮೇ 15 ರಂದು ಏಳನೇ ತರಗತಿಯ ವಿದ್ಯಾರ್ಥಿ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದ. ಪೋಷಕರು ಮಗನಿಗಾಗಿ ಹುಡುಕಾಟ ಆರಂಭಿಸಿದ ಬಳಿಕ ಶಿವಕುಮಾರ್, ಪ್ರಾಣೇಶ್ ನನ್ನು ಯಾರೋ ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಶವ ನೋಡಿರುವುದಾಗಿ ಹೇಳಿದ್ದಾನೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಸರ್ಜಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು ವಿಚಾರಣೆ ವೇಳೆ ಶಿವಕುಮಾರ್ ಹೇಳಿಕೆ ಬದಲಾಯಿಸಿದ್ದಾನೆ. ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ನಿಜ ವಿಷಯ ಬಾಯಿ ಬಿಟ್ಟಿದ್ದಾನೆ.
ಶಿವಕುಮಾರ್ ತಮ್ಮನ ತಲೆ ಮತ್ತು ಹೊಟ್ಟೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ಸುತ್ತಿಗೆಯನ್ನ ತೆಗೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ
ಆಂಧ್ರದ ಕರ್ನೂಲ್ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆಯಿದ್ದ ಹಿನ್ನೆಲೆ ಬೆಂಗಳೂರಿನ ಮನೆಗೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್ನ ಮೊಬೈಲ್ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್ಗೆ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪ್ರಾಣೇಶ್ತಲೆ, ಹೊಟ್ಟೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
Bangalore elder brother kills brother for using his mobile phone to play games. The arrested has been identified as Shivakumar.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm