ಬ್ರೇಕಿಂಗ್ ನ್ಯೂಸ್
19-05-24 10:42 am HK News Desk ಕರ್ನಾಟಕ
ಹುಬ್ಬಳ್ಳಿ , ಮೇ 19: ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧ ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದ ಆರೋಪದ ಮೇಲೆ ಈ ಹಿಂದೆ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ಕಾನ್ಸ್ಟೆಬಲ್ ಇಬ್ಬರನ್ನ ಅಮಾನತು ಮಾಡಲಾಗಿತ್ತು. ಈಗ ಶನಿವಾರ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಯನ್ನ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್ ಅಮಾನತಾದ ಅಧಿಕಾರಿ. ಈ ಹತ್ಯೆ ಪ್ರಕರಣದಲ್ಲಿ ಮೂವರು ಪೊಲೀಸರ ಅಮಾನತಾದಂತಾಗಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಅಂಜಲಿ ಕುಟುಂಬದವರು ಹೋಗಿ ಮಾಹಿತಿ ನೀಡಿದ ಬಳಿಕವೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ರೇಖಾ ಹಾವರಡ್ಡಿ ಯನ್ನ ಅಮಾನತು ಮಾಡಿದ್ದರು. ಇನ್ನೂ ಕೆಲ ಅಧಿಕಾರಿಗಳ ಮೇಲೆ ನಿರ್ಲಕ್ಷ್ಯ ಆರೋಪ ಮಾಡಲಾಗಿದ್ದು ಅವರಿಗೂ ಕ್ರಮದ ಭಯ ಕಾಡುತ್ತಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ಕಳೆದ ಮೇ 15 ರಂದು ಮುಂಜಾನೆ ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಮನೆಗೆ ನುಗ್ಗಿದ ಯುವಕ ಚಾಕುವಿನಿಂದ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಇರಿದು ಪರಾರಿಯಾಗಿದ್ದ. ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಮನೆಯವರ ಎದುರಲ್ಲೇ ಯುವತಿ ಅಂಜಲಿ ಕೊನೆಯುಸಿರೆಳೆದಿದ್ದಳು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ (21) ಎಂಬಾತನನ್ನು ದಾವಣಗೆರೆಯಲ್ಲಿ ರೈಲ್ವೆ ಪೊಲೀಸರ ನೆರವಿನೊಂದಿಗೆ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ.
Karnataka Police Suspends DCP P Rajeev For Alleged Negligence In Anjali murder case in Hubballi. It is said that Rajeev has shown negligence in the case and therefore state government has issued for suspension.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm