ಬ್ರೇಕಿಂಗ್ ನ್ಯೂಸ್
19-05-24 11:54 am Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ವಿಮಾನವನ್ನ ತುರ್ತು ಲ್ಯಾಂಡಿಂಗ್ ಮಾಡಿ ಅನಾಹುತ ತಪ್ಪಿದೆ. ವಿಮಾನದಲ್ಲಿದ್ದ 179 ಪ್ರಯಾಣಿಕರು ಸೇಫ್ ಆಗಿದ್ದಾರೆ. 25 ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ.
ರಾತ್ರಿ 11.20ಕ್ಕೆ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತುಕೊಂಡ ಪೈಲಟ್ ತಕ್ಷಣವೇ ತುರ್ತು ಭೂ ಸ್ಪರ್ಶ ಮಾಡಿದ್ದಾರೆ. ಬಳಿಕ ವಿಮಾನದಲ್ಲಿದ್ದ 179 ಪ್ರಯಾಣಿಕರನ್ನು ಸೇಫ್ ಆಗಿ ಕೆಳಗೆ ಇಳಿಸಿದ್ದಾರೆ. ಲ್ಯಾಂಡಿಂಗ್ ಮಾಡಿ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ವಿಮಾನ ನಿಲ್ದಾಣ ಅಧಿಕಾರಿ, ಲ್ಯಾಂಡಿಂಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಮತ್ತು ವಿಮಾನ ಲ್ಯಾಂಡ್ ಆದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು ಎಂದು ಎಂದು ಸ್ಪಷ್ಟಪಡಿಸಿದ್ದಾರೆ.
ಏರ್ಲೈನ್ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, ಟೇಕಾಫ್ ಆದ ನಂತರ ಬಲ ಇಂಜಿನ್ನಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಪರಿಣಾಮ ಬೆಂಗಳೂರು-ಕೊಚ್ಚಿ ವಿಮಾನವನ್ನು ವಾಪಸ್ ಲ್ಯಾಂಡಿಗ್ ಮಾಡಲಾಯಿತು. ಲ್ಯಾಂಡ್ ಆಗುತ್ತಿದ್ದಂತೆ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ.
Bengaluru: An Air India Express flight from Bengaluru to Kochi had an emergency landing at the Kempegowda International Airport minutes after take-off, late on Saturday night, after one of the aircraft engines caught fire.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm