ಬ್ರೇಕಿಂಗ್ ನ್ಯೂಸ್
21-05-24 10:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21: ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಬೆಂಗಳೂರಿನ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿ.ಕೆ. ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು
ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೋಗಳನ್ನು ತಂದು ಕೊಟ್ಟಿದ್ದೆ ಡಿಕೆಶಿಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ಕುಮಾರಸ್ವಾಮಿ ಅವರು ದೂರಿದರು.
ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಇಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ದೇವರಾಜೇಗೌಡ, ಶಿವರಾಮೇಗೌಡ ನಡುವಿನ ಮೊಬೈಲ್ ಸಂಭಾಷಣೆ ಹೊರಬಂದಾಗಿನಿಂದ ಡಿಕೆಶಿ ಮಾತನಾಡುತ್ತಿಲ್ಲ. ಅದಕ್ಕೆ ನಾನು ಕೇಳಿದ್ದು, ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು. ಇದಕ್ಕೆ ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ. ನಾನು ಮೊದಲಿನಿಂದಲೂ ಹೇಳಿದ್ದೇನೆ, ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗಬೇಕು ಎಂದಿದ್ದೇನೆ.
ಪೆನ್ ಡ್ರೈವ್ ಸೃಷ್ಟಿ ಮಾಡಿ ಅದನ್ನೆಲ್ಲಾ ಹೊರಗೆ ತಂದು ಮಹಿಳೆಯರಿಗೆ ಕಂಟಕರಾದವರೇ ಇವತ್ತು ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಎನ್ ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನು ಯಾವಾಗ ಹೊರಕ್ಕೆ ಹಾಕುತ್ತೀರಿ ಎಂದು ಕೇಳುತ್ತಾರೆ. ಆಡಿಯೋ ಸಂಭಾಷಣೆಯಲ್ಲಿ ಈ ಅಂಶವೂ ಇದೆ. ಅಲ್ಲಿಗೆ ಇವರ ದುರುದ್ದೇಶ ಏನು ಎನ್ನುವುದು ಅರ್ಥ ಆಯಿತಲ್ಲವೇ ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.
Pen drive was first handed over to DK Shivakumar, he must resign says Hd Kumaraswamy. Entire nation has come to know how cheap is DK Shivakumar he slammed
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm