ಬ್ರೇಕಿಂಗ್ ನ್ಯೂಸ್
21-05-24 10:08 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21: ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.
ಬೆಂಗಳೂರಿನ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿ.ಕೆ. ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು
ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೋಗಳನ್ನು ತಂದು ಕೊಟ್ಟಿದ್ದೆ ಡಿಕೆಶಿಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ಕುಮಾರಸ್ವಾಮಿ ಅವರು ದೂರಿದರು.
ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಇಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ದೇವರಾಜೇಗೌಡ, ಶಿವರಾಮೇಗೌಡ ನಡುವಿನ ಮೊಬೈಲ್ ಸಂಭಾಷಣೆ ಹೊರಬಂದಾಗಿನಿಂದ ಡಿಕೆಶಿ ಮಾತನಾಡುತ್ತಿಲ್ಲ. ಅದಕ್ಕೆ ನಾನು ಕೇಳಿದ್ದು, ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು. ಇದಕ್ಕೆ ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ. ನಾನು ಮೊದಲಿನಿಂದಲೂ ಹೇಳಿದ್ದೇನೆ, ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗಬೇಕು ಎಂದಿದ್ದೇನೆ.
ಪೆನ್ ಡ್ರೈವ್ ಸೃಷ್ಟಿ ಮಾಡಿ ಅದನ್ನೆಲ್ಲಾ ಹೊರಗೆ ತಂದು ಮಹಿಳೆಯರಿಗೆ ಕಂಟಕರಾದವರೇ ಇವತ್ತು ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಎನ್ ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನು ಯಾವಾಗ ಹೊರಕ್ಕೆ ಹಾಕುತ್ತೀರಿ ಎಂದು ಕೇಳುತ್ತಾರೆ. ಆಡಿಯೋ ಸಂಭಾಷಣೆಯಲ್ಲಿ ಈ ಅಂಶವೂ ಇದೆ. ಅಲ್ಲಿಗೆ ಇವರ ದುರುದ್ದೇಶ ಏನು ಎನ್ನುವುದು ಅರ್ಥ ಆಯಿತಲ್ಲವೇ ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.
Pen drive was first handed over to DK Shivakumar, he must resign says Hd Kumaraswamy. Entire nation has come to know how cheap is DK Shivakumar he slammed
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm