ಬ್ರೇಕಿಂಗ್ ನ್ಯೂಸ್
22-05-24 04:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 22: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ದಾಳಿ ನಡೆಸಿ ವೈದ್ಯ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ 11 ಸ್ಥಳಗಳಲ್ಲಿ ಎನ್ಐಎ ಶೋಧ ನಡೆಸಿದ್ದು, ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದೆ.
ಮಂಗಳವಾರ ಮುಂಜಾನೆ ಬೆಂಗಳೂರಿನ ಜೆ.ಪಿ. ನಗರ ಮತ್ತು ಹೆಗಡೆ ನಗರದ ಎರಡು ಕಡೆ ಹಾಗೂ ಹುಬ್ಬಳ್ಳಿಯ ಕಸಬಾ ಪೇಟೆ ಠಾಣೆ ವ್ಯಾಪ್ತಿಯ 2 ಕಡೆ ಇಬ್ಬರ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ. ಈ ವೇಳೆ, ಬೆಂಗಳೂರಿನಲ್ಲಿ ಡಾ. ಸಬೀಲ್ ಅಹ್ಮದ್ ಅಲಿಯಾಸ್ ಮೋಟು ಡಾಕ್ಟರ್ ಮತ್ತು ಹುಬ್ಬಳ್ಳಿಯ ಶೋಯಬ್ ಮಿರ್ಜಾ ಅಲಿ ಯಾಸ್ ಛೋಟು ಹಾಗೂ ಈತನ ಸಹೋದರ ಅಜೀಜ್ ಅಹಮದ್ ಮಿರ್ಜಾ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್ಗೆ ವಿದೇಶದಲ್ಲಿರುವ ಹ್ಯಾಂಡ್ಲರ್ಗಳ ಸೂಚನೆ ಮೇರೆಗೆ ಆರ್ಥಿಕ ನೆರವು ನೀಡಿದ್ದರು. ಅಲ್ಲದೆ ಈ ಹಿಂದೆ ಇದೇ ಆರೋಪಿಗಳನ್ನು ವಿದೇಶದಿಂದಲೇ ನಿಯಂತ್ರಿಸುತ್ತಿದ್ದರು ಎನ್ನಲಾಗಿದೆ. ದಾಳಿ ಸಂದರ್ಭದಲ್ಲಿ ಡಿಜಿಟಲ್ ಸಾಮಗ್ರಿ ಹಾಗೂ ಕೆಲವು ದಾಖಲೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರರು ಕೋಡ್ವರ್ಡ್ ಮೂಲಕ ಸಂಭಾಷಣೆ ನಡೆಸುತ್ತಿದ್ದರು. ಜೊತೆಗೆ, ಐಸಿಸ್ ಉಗ್ರರೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಮೇರೆಗೆ 10-12 ಜನರಿದ್ದ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಆಗಮಿಸಿತ್ತು. ಮಂಗಳವಾರ ಬೆಳಗ್ಗೆ ಪ್ರತ್ಯೇಕ ಮೂರು ತಂಡಗಳಲ್ಲಿ ಕಸಬಾಪೇಟೆ ವ್ಯಾಪ್ತಿಯ ಹಳೇ ಹುಬ್ಬಳ್ಳಿ ರಜಿಯಾ ಟೌನ್ ನಿವಾಸಿ ಶೋಯೆಬ್ ಮಿರ್ಜಾ ಹಾಗೂ ಸಹೋದರ ಅಜೀಜ್ ಅಹಮದ್ ಮಿರ್ಜಾ ನಿವಾಸಕ್ಕೆ ತೆರಳಿ ವಿಚಾರಣೆ ಆರಂಭಿಸಿದ್ದರು. ಅನಂತರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ಎನ್ಐಎ ಕಚೇರಿಗೆ ಕರೆದೊಯ್ದರು ಎನ್ನಲಾಗಿದೆ.
The National Investigation Agency (NIA) has arrested three persons, including a doctor, in connection with the Rameswaram café blast case. The NIA conducted searches at 11 locations in Karnataka, Telangana, Andhra Pradesh and Tamil Nadu and detained 11 people.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm