ಬ್ರೇಕಿಂಗ್ ನ್ಯೂಸ್
22-05-24 04:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 22: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ದಾಳಿ ನಡೆಸಿ ವೈದ್ಯ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ 11 ಸ್ಥಳಗಳಲ್ಲಿ ಎನ್ಐಎ ಶೋಧ ನಡೆಸಿದ್ದು, ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದೆ.
ಮಂಗಳವಾರ ಮುಂಜಾನೆ ಬೆಂಗಳೂರಿನ ಜೆ.ಪಿ. ನಗರ ಮತ್ತು ಹೆಗಡೆ ನಗರದ ಎರಡು ಕಡೆ ಹಾಗೂ ಹುಬ್ಬಳ್ಳಿಯ ಕಸಬಾ ಪೇಟೆ ಠಾಣೆ ವ್ಯಾಪ್ತಿಯ 2 ಕಡೆ ಇಬ್ಬರ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ. ಈ ವೇಳೆ, ಬೆಂಗಳೂರಿನಲ್ಲಿ ಡಾ. ಸಬೀಲ್ ಅಹ್ಮದ್ ಅಲಿಯಾಸ್ ಮೋಟು ಡಾಕ್ಟರ್ ಮತ್ತು ಹುಬ್ಬಳ್ಳಿಯ ಶೋಯಬ್ ಮಿರ್ಜಾ ಅಲಿ ಯಾಸ್ ಛೋಟು ಹಾಗೂ ಈತನ ಸಹೋದರ ಅಜೀಜ್ ಅಹಮದ್ ಮಿರ್ಜಾ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್ಗೆ ವಿದೇಶದಲ್ಲಿರುವ ಹ್ಯಾಂಡ್ಲರ್ಗಳ ಸೂಚನೆ ಮೇರೆಗೆ ಆರ್ಥಿಕ ನೆರವು ನೀಡಿದ್ದರು. ಅಲ್ಲದೆ ಈ ಹಿಂದೆ ಇದೇ ಆರೋಪಿಗಳನ್ನು ವಿದೇಶದಿಂದಲೇ ನಿಯಂತ್ರಿಸುತ್ತಿದ್ದರು ಎನ್ನಲಾಗಿದೆ. ದಾಳಿ ಸಂದರ್ಭದಲ್ಲಿ ಡಿಜಿಟಲ್ ಸಾಮಗ್ರಿ ಹಾಗೂ ಕೆಲವು ದಾಖಲೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರರು ಕೋಡ್ವರ್ಡ್ ಮೂಲಕ ಸಂಭಾಷಣೆ ನಡೆಸುತ್ತಿದ್ದರು. ಜೊತೆಗೆ, ಐಸಿಸ್ ಉಗ್ರರೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಮೇರೆಗೆ 10-12 ಜನರಿದ್ದ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಆಗಮಿಸಿತ್ತು. ಮಂಗಳವಾರ ಬೆಳಗ್ಗೆ ಪ್ರತ್ಯೇಕ ಮೂರು ತಂಡಗಳಲ್ಲಿ ಕಸಬಾಪೇಟೆ ವ್ಯಾಪ್ತಿಯ ಹಳೇ ಹುಬ್ಬಳ್ಳಿ ರಜಿಯಾ ಟೌನ್ ನಿವಾಸಿ ಶೋಯೆಬ್ ಮಿರ್ಜಾ ಹಾಗೂ ಸಹೋದರ ಅಜೀಜ್ ಅಹಮದ್ ಮಿರ್ಜಾ ನಿವಾಸಕ್ಕೆ ತೆರಳಿ ವಿಚಾರಣೆ ಆರಂಭಿಸಿದ್ದರು. ಅನಂತರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ಎನ್ಐಎ ಕಚೇರಿಗೆ ಕರೆದೊಯ್ದರು ಎನ್ನಲಾಗಿದೆ.
The National Investigation Agency (NIA) has arrested three persons, including a doctor, in connection with the Rameswaram café blast case. The NIA conducted searches at 11 locations in Karnataka, Telangana, Andhra Pradesh and Tamil Nadu and detained 11 people.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm