ಬ್ರೇಕಿಂಗ್ ನ್ಯೂಸ್
22-05-24 08:15 pm HK News Desk ಕರ್ನಾಟಕ
ಶಿವಮೊಗ್ಗ, ಮೇ 23: ಡಾ.ಧನಂಜಯ ಸರ್ಜಿ ಅವರ ವೈದ್ಯ ವೃತ್ತಿಯ ಅನುಭವ ಹಾಗೂ ಪದವೀಧರರ ಸಂಪೂರ್ಣ ಸಮಸ್ಯೆಗಳ ಅರಿವು ಅವರಿಗಿರುವುದರಿಂದ ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಾರೆಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.
ನೈರುತ್ಯ ಪದವೀದರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ವಾಸವಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸೊರಬ ಮಂಡಲ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರ ಗೆಲುವಿಗಾಗಿ ಎಲ್ಲ ಮುಖಂಡರು , ಕಾರ್ಯಕರ್ತರು ಒಂದಾಗಿ ಶ್ರಮಿಸೋಣ ಎಂದರು.


ಈ ಹಿಂದೆ ಬಿಜೆಪಿಯಲ್ಲಿದ್ದು ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ ಕೇಳುತ್ತಿದ್ದಾರೆಂದರೆ ಕಳೆದ ಪರಿಷತ್ ಚುನಾವಣೆಯಲ್ಲಿ ಹಿಂದೆ ಮತ ನೀಡಿದ ಪದವೀಧರ ಮತದಾರರನ್ನು ತಿರಸ್ಕರಿಸಿದ್ದಾರೆ ಎಂದರ್ಥ ಎಂದು ಟೀಕಿಸಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಹುಟ್ಟಿದಾಗ ಉಸಿರಿರುತ್ತೆ, ಹೆಸರಿರೋದಿಲ್ಲ, ಸಾಯುವಾಗ ಹೆಸರಿರುತ್ತೆ ಉಸಿರಿರೋದಿಲ್ಲ. ಈ ಉಸಿರು ಮತ್ತು ಹೆಸರಿನ ನಡುವೆ ಇರುವ ಜೀವನ ಮತ್ತು ಕಾಲವನ್ನು ನಾವು ಸಾಧನೆ ಮಾಡುವ ಮೂಲಕ, ನಿಸ್ವಾರ್ಥ ಸಮಾಜ ಸೇವೆ ಮೂಲಕ ಸಾರ್ಥಕ ಗಳಿಸಿಕೊಳ್ಳಬೇಕು. ಜನಸೇವೆ ಮಾಡಬೇಕೆಂಬ ತುಡಿತದಿಂದ ಈ ಕ್ಷೇತ್ರಕ್ಕೆ ಬಂದಿದ್ದೇನೆ, ವಿಧಾನ ಪರಿಷತ್ ಪ್ರವೇಶಿಸಿ ಪದವೀಧರರ ಸೇವೆ ಮಾಡುವ ಅವಕಾಶವನ್ನು ತಾವೆಲ್ಲರೂ ಮಾಡಿಕೊಡಬೇಕೆಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಂಡಲ ಅಧ್ಯಕ್ಷರಾದ ಪ್ರಕಾಶ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ ಅವರು ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಓಬಿಸಿ ಮೋರ್ಚಾದ ಅಧ್ಯಕ್ಷ ಎಂ.ಡಿ. ಉಮೇಶ್, ತಾಲ್ಲೂಕು ಮುಖಂಡರಾದ ದೇವೇಂದ್ರಪ್ಪ, ಮಂಡಲದ ಅಧ್ಯಕ್ಷರಾದ ಪ್ರಕಾಶಣ್ಣ ತಲಕಾಲಕೊಪ್ಪ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು ಮುಖಂಡರಾದ ಗೀತಾ ಮಲ್ಲಿಕಾರ್ಜುನ, ಗುರುಕುಮಾರ ಪಾಟೀಲ್, ಕೊಟ್ರೇಶ್ ಹಾಗೂ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಮುಖಂಡರು ಹಾಗೂ ಪದವೀಧರ ಕ್ಷೇತ್ರದ ಮತದಾರರು ಭಾಗವಹಿಸಿದ್ದರು.
Congress MLA Madhu Bangarappa bats for Dr Dhananjaya Sarji, says he's the right candidate in shivamogga for Vidhan Parishad electiona
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm