ಬ್ರೇಕಿಂಗ್ ನ್ಯೂಸ್
22-05-24 08:15 pm HK News Desk ಕರ್ನಾಟಕ
ಶಿವಮೊಗ್ಗ, ಮೇ 23: ಡಾ.ಧನಂಜಯ ಸರ್ಜಿ ಅವರ ವೈದ್ಯ ವೃತ್ತಿಯ ಅನುಭವ ಹಾಗೂ ಪದವೀಧರರ ಸಂಪೂರ್ಣ ಸಮಸ್ಯೆಗಳ ಅರಿವು ಅವರಿಗಿರುವುದರಿಂದ ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಾರೆಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.
ನೈರುತ್ಯ ಪದವೀದರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ವಾಸವಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸೊರಬ ಮಂಡಲ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರ ಗೆಲುವಿಗಾಗಿ ಎಲ್ಲ ಮುಖಂಡರು , ಕಾರ್ಯಕರ್ತರು ಒಂದಾಗಿ ಶ್ರಮಿಸೋಣ ಎಂದರು.


ಈ ಹಿಂದೆ ಬಿಜೆಪಿಯಲ್ಲಿದ್ದು ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ ಕೇಳುತ್ತಿದ್ದಾರೆಂದರೆ ಕಳೆದ ಪರಿಷತ್ ಚುನಾವಣೆಯಲ್ಲಿ ಹಿಂದೆ ಮತ ನೀಡಿದ ಪದವೀಧರ ಮತದಾರರನ್ನು ತಿರಸ್ಕರಿಸಿದ್ದಾರೆ ಎಂದರ್ಥ ಎಂದು ಟೀಕಿಸಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಹುಟ್ಟಿದಾಗ ಉಸಿರಿರುತ್ತೆ, ಹೆಸರಿರೋದಿಲ್ಲ, ಸಾಯುವಾಗ ಹೆಸರಿರುತ್ತೆ ಉಸಿರಿರೋದಿಲ್ಲ. ಈ ಉಸಿರು ಮತ್ತು ಹೆಸರಿನ ನಡುವೆ ಇರುವ ಜೀವನ ಮತ್ತು ಕಾಲವನ್ನು ನಾವು ಸಾಧನೆ ಮಾಡುವ ಮೂಲಕ, ನಿಸ್ವಾರ್ಥ ಸಮಾಜ ಸೇವೆ ಮೂಲಕ ಸಾರ್ಥಕ ಗಳಿಸಿಕೊಳ್ಳಬೇಕು. ಜನಸೇವೆ ಮಾಡಬೇಕೆಂಬ ತುಡಿತದಿಂದ ಈ ಕ್ಷೇತ್ರಕ್ಕೆ ಬಂದಿದ್ದೇನೆ, ವಿಧಾನ ಪರಿಷತ್ ಪ್ರವೇಶಿಸಿ ಪದವೀಧರರ ಸೇವೆ ಮಾಡುವ ಅವಕಾಶವನ್ನು ತಾವೆಲ್ಲರೂ ಮಾಡಿಕೊಡಬೇಕೆಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಂಡಲ ಅಧ್ಯಕ್ಷರಾದ ಪ್ರಕಾಶ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ ಅವರು ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಓಬಿಸಿ ಮೋರ್ಚಾದ ಅಧ್ಯಕ್ಷ ಎಂ.ಡಿ. ಉಮೇಶ್, ತಾಲ್ಲೂಕು ಮುಖಂಡರಾದ ದೇವೇಂದ್ರಪ್ಪ, ಮಂಡಲದ ಅಧ್ಯಕ್ಷರಾದ ಪ್ರಕಾಶಣ್ಣ ತಲಕಾಲಕೊಪ್ಪ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು ಮುಖಂಡರಾದ ಗೀತಾ ಮಲ್ಲಿಕಾರ್ಜುನ, ಗುರುಕುಮಾರ ಪಾಟೀಲ್, ಕೊಟ್ರೇಶ್ ಹಾಗೂ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಮುಖಂಡರು ಹಾಗೂ ಪದವೀಧರ ಕ್ಷೇತ್ರದ ಮತದಾರರು ಭಾಗವಹಿಸಿದ್ದರು.
Congress MLA Madhu Bangarappa bats for Dr Dhananjaya Sarji, says he's the right candidate in shivamogga for Vidhan Parishad electiona
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm